ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟ : ಮುಡಿ ತೆಗೆಯಲು ಹೆಚ್ಚಿನ ಹಣ ವಸೂಲಿ – ಭಕ್ತರ ಆರೋಪ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ ಮಾಡಿಸಲು 50ರೂ ಟಿಕೆಟ್ ಮಾತ್ರ ಪಡೆಯಬೇಕೆಂದು ನಾಮಫಲಕದಲ್ಲಿದೆ. ಟಿಕೆಟ್ ಪಡೆದುಕೊಂಡು ಮುಡಿ ಮಾಡಿಸಲು ಹೋಗುವ ಭಕ್ತರನ್ನು ಮುಡಿ ಮಾಡುವವರು ಮೊದಲೇ ಇಂತಿಷ್ಟು ಹಣ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರಿಗೆ ಧಮಕಿಯನ್ನು ಹಾಕಿ ಎದುರಿಸುತ್ತಿದ್ದಾರೆ, ಹಣ ನೀಡದಿದ್ದರೆ ಮುಡಿಯನ್ನು ಸರಿಯಾಗಿ ಮಾಡದೆ ಯದ್ವ ತದ್ವ ರಕ್ತ ಬರುವ ರೀತಿ ಮುಡಿ ಮಾಡುತ್ತಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಿಲ್ ಕುಮಾರ್ ಎಂಬುವರು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಟಿ ಕೋಟಿ ಆದಾಯ ಬಂದ್ರು ನಮ್ಮ ಕೂದಲು ಕೊಡಕ್ಕೆ ದುಡ್ಡು ಕೊಡಬೇಕು ಇನ್ನು ಇವರೆಲ್ಲ ಹೇಗೆ ಅಭಿವೃದ್ಧಿ ಮಾಡುತ್ತಾರೆ. ಶ್ರೀ ಕ್ಷೇತ್ರದಲ್ಲಿ ನಿಮ್ಮಿಂದ ಭಕ್ತರಿಗೆ ಯಾವುದಾದರೂ ಒಂದು ಉಚಿತ ಸೇವೆ ಅಂತ ಏನಾದರೂ ಇದ್ದರೆ ಹೇಳಿ ನಾಚಿಕೆ ಆಗಬೇಕು ನಿಮಗೆ ದೇವರ ಹೆಸರಲ್ಲಿ ದುಡ್ಡು ಮಾಡುತ್ತಿರುವ ನಿಮಗೆ ದೇವರೇ ಬುದ್ಧಿ ಕಲಿಸುತ್ತಾನೆ ನೋಡಿರಿ ಎಂದು ಪೋಸ್ಟ್ ಮಾಡಿದ್ದಾರೆ.


ಮುಡಿ ಮಾಡಲು ಟಿಕೆಟ್ ಮಾತ್ರ ಪಡೆಯಬೇಕು ಹೆಚ್ಚಿನ ಹಣ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಈ ಕೂಡಲೇ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಸೂಚನೆ ನೀಡುತ್ತೇನೆ.

ಕಾತ್ಯಾಯಿನಿ ದೇವಿ

ಕಾರ್ಯದರ್ಶಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 hour ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 hour ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

1 hour ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

2 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

2 hours ago