ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟ : ಮುಡಿ ತೆಗೆಯಲು ಹೆಚ್ಚಿನ ಹಣ ವಸೂಲಿ – ಭಕ್ತರ ಆರೋಪ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ ಮಾಡಿಸಲು 50ರೂ ಟಿಕೆಟ್ ಮಾತ್ರ ಪಡೆಯಬೇಕೆಂದು ನಾಮಫಲಕದಲ್ಲಿದೆ. ಟಿಕೆಟ್ ಪಡೆದುಕೊಂಡು ಮುಡಿ ಮಾಡಿಸಲು ಹೋಗುವ ಭಕ್ತರನ್ನು ಮುಡಿ ಮಾಡುವವರು ಮೊದಲೇ ಇಂತಿಷ್ಟು ಹಣ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರಿಗೆ ಧಮಕಿಯನ್ನು ಹಾಕಿ ಎದುರಿಸುತ್ತಿದ್ದಾರೆ, ಹಣ ನೀಡದಿದ್ದರೆ ಮುಡಿಯನ್ನು ಸರಿಯಾಗಿ ಮಾಡದೆ ಯದ್ವ ತದ್ವ ರಕ್ತ ಬರುವ ರೀತಿ ಮುಡಿ ಮಾಡುತ್ತಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನಿಲ್ ಕುಮಾರ್ ಎಂಬುವರು ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಕೋಟಿ ಕೋಟಿ ಆದಾಯ ಬಂದ್ರು ನಮ್ಮ ಕೂದಲು ಕೊಡಕ್ಕೆ ದುಡ್ಡು ಕೊಡಬೇಕು ಇನ್ನು ಇವರೆಲ್ಲ ಹೇಗೆ ಅಭಿವೃದ್ಧಿ ಮಾಡುತ್ತಾರೆ. ಶ್ರೀ ಕ್ಷೇತ್ರದಲ್ಲಿ ನಿಮ್ಮಿಂದ ಭಕ್ತರಿಗೆ ಯಾವುದಾದರೂ ಒಂದು ಉಚಿತ ಸೇವೆ ಅಂತ ಏನಾದರೂ ಇದ್ದರೆ ಹೇಳಿ ನಾಚಿಕೆ ಆಗಬೇಕು ನಿಮಗೆ ದೇವರ ಹೆಸರಲ್ಲಿ ದುಡ್ಡು ಮಾಡುತ್ತಿರುವ ನಿಮಗೆ ದೇವರೇ ಬುದ್ಧಿ ಕಲಿಸುತ್ತಾನೆ ನೋಡಿರಿ ಎಂದು ಪೋಸ್ಟ್ ಮಾಡಿದ್ದಾರೆ.


ಮುಡಿ ಮಾಡಲು ಟಿಕೆಟ್ ಮಾತ್ರ ಪಡೆಯಬೇಕು ಹೆಚ್ಚಿನ ಹಣ ಕೇಳುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ ಈ ಕೂಡಲೇ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಸೂಚನೆ ನೀಡುತ್ತೇನೆ.

ಕಾತ್ಯಾಯಿನಿ ದೇವಿ

ಕಾರ್ಯದರ್ಶಿಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago