ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟ : ವಿಜೃಂಭಣೆ ರಥೋತ್ಸವದೊಂದಿಗೆ ಶಿವರಾತ್ರಿ ಜಾತ್ರೆ ಸಂಪನ್ನ

ಹನೂರು : ರಾಜ್ಯದ ಧಾರ್ಮಿಕ ಪವಿತ್ರ ಯಾತ್ರಾಸ್ಥಳವಾದ ಮಲೆ ಮಾದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯಲ್ಲಿ ಮಂಗಳವಾರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಜಾತ್ರೆಯ ಹಿನ್ನೆಲೆಯಲ್ಲಿ ಬೆಳಿಗ್ಗೆ 8.20ರಿಂದ 9:10 ವರೆಗಿನ ಶುಭ ಲಗ್ನದಲ್ಲಿ ವಿಧಿ ವಿಧಾನಗಳೊಂದಿಗೆ ಸಂಪ್ರದಾಯದಂತೆ ಮಹಾರಥೋತ್ಸವ ಜರುಗಿತು. ಬೆಳಗಿನ ಜಾವ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಸಾಲೂರು ಬೃಹನ್ ಮಠ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಬೇಡಗಂಪಣ ಅರ್ಚಕ ವೃಂದದವರು ಪೂಜೆ ನೆರವೇರಿಸಿ ಪ್ರದಕ್ಷಿಣೆ ಹಾಕಿದರು.

ಮಹದೇಶ್ವರ ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಯವರ ಸಮ್ಮುಖದಲ್ಲಿ ಬಿಲ್ವಾರ್ಚನೆ ಧೂಪ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ಬೇಡಗಂಪಣ ಸಮುದಾಯದ 101 ಹೆಣ್ಣು ಮಕ್ಕಳಿಂದ ಬೆಲ್ಲದ ಆರತಿ ಬೆಳಗಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಉಘೇ ಮಾದಪ್ಪ ಉಘೇ: ಸೂಕ್ತ ಪೊಲೀಸ್ ಬಂದೋ ಬಸ್ತ್ ನೊಂದಿಗೆ ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ, ಸುರಪಾನಿ, ಛತ್ರಿ, ಚಾಮರ ನಂದಿ ದ್ವಜ ಕಂಬ ಹಾಗೂ ಮಂಗಳವಾದ್ಯದೊಂದಿಗೆ ದೇಗುಲದ ಸುತ್ತ ಪ್ರದಕ್ಷಣೆ ಹಾಕಲಾಯಿತು. ಈ ವೇಳೆ ಬೆಲ್ಲದ ಆರತಿ ಬೆಳಗಿದ ಹೆಣ್ಣು ಮಕ್ಕಳು ಅರ್ಚಕರು ಪ್ರಾಧಿಕಾರದ ಅಧಿಕಾರಿಗಳು ಹಾಗೂ ಲಕ್ಷಾಂತರ ಮಂದಿ ಭಕ್ತರ ಸಮ್ಮುಖದಲ್ಲಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು. ಸಾರ್ವಜನಿಕರು ಭಕ್ತಿ ಭಾವದಿಂದ ತೇರನ್ನು ಎಳೆದು ಹಣ್ಣುಜಾವನ ಧಾನ್ಯ ಎಸೆದು “ಉಘೇ ಮಾದಪ್ಪ ಉಘೇ” “ಉಘೇ ಮೈಕಾರ” ಎಂಬ ಜಯ ಘೋಷಗಳನ್ನು ಮುಳುಗಿಸಿದರು.

ರಥೋತ್ಸವಕ್ಕೆ 88 ವರ್ಷ : ಮೈಸೂರಿನ ರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು 1935 ಏಪ್ರಿಲ್ ನಾಲ್ಕರಂದು ಯುಗಾದಿ ಹಬ್ಬದ ಮೊದಲ ದೊಡ್ಡ ಜಾತ್ರೆಗೆ ರಥವನ್ನು ಕೊಡುಗೆ ನೀಡಿದ್ದರು. ಇದೀಗ ರಥಕ್ಕೆ ಬರೋಬರಿ 88 ವರ್ಷವಾಗಿದೆ. ಅಂದಿನ ಕಾಲದ ದೇವಸ್ಥಾನದ ಕಮಿಟಿ ಸದಸ್ಯರಾದ ಸಾಲೂರು ಮಠದ ವೇದಮೂರ್ತಿ ಶಾಂತಲಿಂಗ ಸ್ವಾಮಿಗಳು,ರಾವ್ ಸಾಹೇಬ್, ಕೊಳ್ಳೇಗಾಲದ ಜಿಪಿ ಮಲ್ಲಪ್ಪ ಪುಟ್ಟ ಮಾದ ತಂಬಡಯ್ಯ ಒಮಾದ ತಂಬಡಯ್ಯ ಎಂಬ ಹೆಸರುಗಳು ರಥದ ಹಿಂಬದಿಯಲ್ಲಿ ಬರೆಯಲಾಗಿದೆ. ಮೈಸೂರು ಅರಮನೆಯ ಕಂಟ್ರಾಕ್ಟರ್ ಮೇಸ್ತ್ರಿ ತಿಮ್ಮಯ್ಯಚಾರ್ಯರ ಮಗ ಅಪ್ಪಾಜಾಚಾರ್ಯರಿಂದ ಘತ ತಯಾರಿಸಲ್ಪಟ್ಟಿದೆ ಎಂಬುದು ನಮುದಾಗಿದೆ.

 

ಹರಸಾಹಸ ಪಟ್ಟ ಪೊಲೀಸರು: ಮಹಾರಥೋತ್ಸವದ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟದ ದೇಗುಲದ ಆವರಣದಲ್ಲಿ ಲಕ್ಷಾಂತರ ಜನರು ಕಿಕ್ಕಿರಿದು ತುಂಬಿದ್ದರು. ತೇರಿನ ಪೂಜೆಯ ವೇಳೆ ಜನಜಂಗುಳಿ ಉಂಟಾಗಿ ಪೊಲೀಸರು ಭಕ್ತರನ್ನು ನಿಯಂತ್ರಿಸಲು ಹರಸಹಾಸ ಪಟ್ಟರು.

ಜಿಲ್ಲಾಧಿಕಾರಿ ಡಿಎಸ್ ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹೊ,ಶ್ರೀ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಉಪ ಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ, ಆಗಮಿಕ ಕರವೀರ ಸ್ವಾಮಿ, ಬೇಡ ಗಂಪಣ ಸಮುದಾಯದ ಹಿರಿಯ ಮುಖಂಡ ಕೆವಿ ಮಾದೇಶ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

10 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

14 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

14 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

15 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

15 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

16 hours ago