ಜಿಲ್ಲೆಗಳು

ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ

ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮಲೆ ಮಹದೇಶ್ವರದಲ್ಲಿ ಮಹದೇಶ್ವರ ಪ್ರಾಧಿಕಾರದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಾಧಿಕಾರಕ್ಕೆ ಸೇರಿದ ೧೫೯ ಎಕರೆ ಇದ್ದು, ಇನ್ನೂ ೭೦ ಎಕರೆ ಬಳಕೆಯಾಗಿಲ್ಲ. ೮೦ ಎಕರೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಶೆಡ್‌ಗಳನ್ನು ತೆಗೆದು ಏನು ಮಾಡಲು ಸಾಧ್ಯವಿದೆ ಎಂದು ಪರಿಶೀಲಿಸಲಾಗುತ್ತದೆ. ಮೂಲ ದೇವಸ್ಥಾನದ ೭೦ ಎಕರೆಗೆ ಮಾಸ್ಟರ್ ಪ್ಲಾನ್ ರಚಿಸಿ ಯೋಜನಾಬದ್ದವಾಗಿ ಅನುಷ್ಠಾನ ಗೊಳಿಸಬೇಕು. ಬಡಜನರು ಇಲ್ಲಿಗೆ ಹೆಚ್ಚು ಬರುವುದರಿಂದ ಡಾರ್ಮಿಟರಿಗಳನ್ನು ನಿರ್ಮಿಸಬೇಕು. ಸುಮಾರು ೫ ಸಾವಿರ ಜನ ಒಂದೇ ಬಾರಿಗೆ ಉಳಿದುಕೊಳ್ಳುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ಮುಂದಿನ ತಿಂಗಳು ಮೂರ್ತಿ ಅನಾವರಣ:ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದೆ ಎಂದರು.

ಸಂಪರ್ಕ ರಸ್ತೆ ನಿರ್ಮಾಣಕ್ಕೆ ೧೦೦ ಕೋಟಿ ರೂ.:

ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು ೧೦೦ ಕೋಟಿ ರೂ.ಗಳನ್ನು ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ಹಣವನ್ನು ನೀಡಲಾಗುವುದು ಎಂದರು.

ಹುಲಿ ಯೋಜನೆ ತೀರ್ಮಾನವಾಗಿಲ್ಲ

ಮಲೈಮಹದೇಶ್ವರ ಹುಲಿ ಯೋಜನೆಯ ಪ್ರಸ್ತಾಪ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ಯಾವುದೇ ರೀತಿ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ, ಶಾಸಕರಾದ ನರೇಂದ್ರ, ಎನ್.ಮಹೇಶ್ , ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮತ್ತಿತರರು ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago