ಜಿಲ್ಲೆಗಳು

ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ದೇಗುಲದಲ್ಲೇ ಮೊದಲ ಬಾರಿ ಸಿಎಂ ನೇತೃತ್ವದಲ್ಲಿ ಸಭೆ: ಹಲವು ಪ್ರಮುಖ ನಿರ್ಣಯ

ಹನೂರು: ಮಲೆ ಮಹದೇಶ್ವರ ದೇಗುಲ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ರಚಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತಮ್ಮ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮಲೆ ಮಹದೇಶ್ವರದಲ್ಲಿ ಮಹದೇಶ್ವರ ಪ್ರಾಧಿಕಾರದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಾಧಿಕಾರಕ್ಕೆ ಸೇರಿದ ೧೫೯ ಎಕರೆ ಇದ್ದು, ಇನ್ನೂ ೭೦ ಎಕರೆ ಬಳಕೆಯಾಗಿಲ್ಲ. ೮೦ ಎಕರೆಯಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಶೆಡ್‌ಗಳನ್ನು ತೆಗೆದು ಏನು ಮಾಡಲು ಸಾಧ್ಯವಿದೆ ಎಂದು ಪರಿಶೀಲಿಸಲಾಗುತ್ತದೆ. ಮೂಲ ದೇವಸ್ಥಾನದ ೭೦ ಎಕರೆಗೆ ಮಾಸ್ಟರ್ ಪ್ಲಾನ್ ರಚಿಸಿ ಯೋಜನಾಬದ್ದವಾಗಿ ಅನುಷ್ಠಾನ ಗೊಳಿಸಬೇಕು. ಬಡಜನರು ಇಲ್ಲಿಗೆ ಹೆಚ್ಚು ಬರುವುದರಿಂದ ಡಾರ್ಮಿಟರಿಗಳನ್ನು ನಿರ್ಮಿಸಬೇಕು. ಸುಮಾರು ೫ ಸಾವಿರ ಜನ ಒಂದೇ ಬಾರಿಗೆ ಉಳಿದುಕೊಳ್ಳುವ ವ್ಯವಸ್ಥೆಯಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ಮುಂದಿನ ತಿಂಗಳು ಮೂರ್ತಿ ಅನಾವರಣ:ಮಲೆ ಮಹಾದೇಶ್ವರನ ಮೂರ್ತಿ ಪೂರ್ಣಗೊಂಡಿದ್ದು ಅದನ್ನು ಮುಂದಿನ ತಿಂಗಳು ಅನಾವರಣವಾಗಲಿದೆ. ಹಲವಾರು ಕಾರ್ಯಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ತಿಳಿಸಿದೆ ಎಂದರು.

ಸಂಪರ್ಕ ರಸ್ತೆ ನಿರ್ಮಾಣಕ್ಕೆ ೧೦೦ ಕೋಟಿ ರೂ.:

ಮಲೆಮಹದೇಶ್ವರ ಕ್ಷೇತ್ರದಲ್ಲಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ ಬಹಳ ಪ್ರಮುಖವಾಗಿದ್ದು, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಪ್ರದೇಶಕ್ಕೆ ಸಂಪರ್ಕ ರಸ್ತೆ ನಿರ್ಮಿಸಲು ೧೦೦ ಕೋಟಿ ರೂ.ಗಳನ್ನು ಮಲೆಮಹದೇಶ್ವರ ಬೆಟ್ಟ ಹಾಗೂ ಕ್ಷೇತ್ರದ ಎರಡೂ ಬದಿಗಳಿಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಗೆ ಹಣವನ್ನು ನೀಡಲಾಗುವುದು ಎಂದರು.

ಹುಲಿ ಯೋಜನೆ ತೀರ್ಮಾನವಾಗಿಲ್ಲ

ಮಲೈಮಹದೇಶ್ವರ ಹುಲಿ ಯೋಜನೆಯ ಪ್ರಸ್ತಾಪ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ಯಾವುದೇ ರೀತಿ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ತೀರ್ಮಾನ ಕೈಗೊಳ್ಳುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ, ಶಾಸಕರಾದ ನರೇಂದ್ರ, ಎನ್.ಮಹೇಶ್ , ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮತ್ತಿತರರು ಹಾಜರಿದ್ದರು.

andolanait

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

10 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

10 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

11 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

11 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

12 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

12 hours ago