ಜಿಲ್ಲೆಗಳು

ಮಲೆಮಹದೇಶ್ವರ ಬೆಟ್ಟ : ನಾಗಮಲೆಗೆ ಮಾರ್ಗಮಧ್ಯದಲ್ಲಿ ಸ್ವಚ್ಛತಾ ಕಾರ್ಯ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಭಕ್ತರು ಬಿಸಾಡಿದ್ದ ಸುಮಾರು ಎರಡು ಟ್ರಾಕ್ಟರ್ ರಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಮೈಸೂರು ವಿಭಾಗದ ಸಂಚಾಲಕ ಚಂದ್ರಶೇಖರ್ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪ್ರತಿಯೊಬ್ಬರು ಪರಿಸರ ರಕ್ಷಣೆ ಮಾಡಲು ಪಣತೊಡಬೇಕು. ಅರಣ್ಯದಲ್ಲಿ ಭಕ್ತರು ಬಿಸಾಡುವ ಪ್ಲಾಸ್ಟಿಕ್ ನಿಂದ ವನ್ಯಪ್ರಾಣಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಯವರು ಹತ್ತಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು ಸಹ ಪ್ರಯೋಜನವಾಗಿಲ್ಲ. ಕೇವಲ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎರಡು ಟ್ರ್ಯಾಕ್ಟರ್ ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಮಾಡಲಾಗಿದೆ. ಕೇವಲ ಒಂದು ಕಿಲೋಮೀಟರ್ ನಲ್ಲಿ ಇಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳಿದ್ದರೆ ಇನ್ನು ಶ್ರೀ ಕ್ಷೇತ್ರದ ಸುತ್ತ ಎಷ್ಟು ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಿಗಲಿದೆ ಎಂಬುದು ಪ್ರಶ್ನೆಯಾಗಿದೆ. ಆದ್ದರಿಂದ ಮಲೆ ಮಾದೇಶ್ವರ ಭಕ್ತರು ಅರಣ್ಯಕ್ಕೆ ಪ್ಲಾಸ್ಟಿಕ್ ವಾಟರ್ ಬಾಟಲ್ ಸೇರಿದಂತೆ ಇತರೆ ಪ್ಲಾಸ್ಟಿಕ್ ಆಹಾರ ತಿನಿಸು ಪದಾರ್ಥಗಳನ್ನು ಅರಣ್ಯಕ್ಕೆ ತೆಗೆದುಕೊಂಡು ಹೋಗಿ ಬಿಸಾಡಬಾರದು ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಸ್ವಚ್ಛತಾ ಕಾರ್ಯದಲ್ಲಿ ಯುವ ಬ್ರಿಗೇಡ್ ನ ಸದಸ್ಯರುಗಳಾದ ಯೋಗೇಶ್, ಗೋಪಾಲ್, ಪ್ರಜ್ವಲ್, ರವಿ, ಶ್ರೀನಿವಾಸ್, ನಿತಿನ್, ಕೀರ್ತಿ, ಮಹದೇವಸ್ವಾಮಿ, ಮಂಜುನಾಥ್, ಪ್ರಶಾಂತ್, ಪ್ರಮೋದ್,ಚಂದ್ರಶೇಖರ್ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಸ್ವಯಂ ಕಾರ್ಯಕರ್ತರು ಭಾಗಿಯಾಗಿದ್ದರು.

andolanait

Recent Posts

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

17 mins ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

2 hours ago

ಓದುಗರ ಪತ್ರ: ಗಬ್ಬು ನಾರುತ್ತಿರುವ ಚಾ.ನಗರದ ಮೋರಿಗಳು

ಜಾನಪದ ತವರೂರಾದ ಚಾಮರಾಜನಗರದ ನಂದಿ ಭವನ ರಸ್ತೆಯ ಖಾಸಗಿ ಬಸ್ ನಿಲ್ದಾಣದ ಸಮೀಪವಿರುವ ಮೋರಿ (ಡ್ರೈನೇಜ್)ಯಲ್ಲಿ ಸ್ವಚ್ಛತೆ ಇಲ್ಲದೆ ತ್ಯಾಜ್ಯ…

2 hours ago

ಓದುಗರ ಪತ್ರ: ಡಾ.ಜಯಮಾಲ ಅವರಿಗೆ ಅಭಿನಂದನೆಗಳು

ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು…

2 hours ago

ಓದುಗರ ಪತ್ರ: ಕಸಾಪ ಗೌರವಕ್ಕೆ ಚ್ಯುತಿ ತಂದ ಜೋಶಿ

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಕಳೆದ ಮೂರು ವರ್ಷಗಳಿಂದ ನಡೆದಿರುವ ಅಧಿಕಾರ…

2 hours ago

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

5 hours ago