ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಭಕ್ತರು ಬಿಸಾಡಿದ್ದ ಸುಮಾರು ಎರಡು ಟ್ರಾಕ್ಟರ್ ರಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಮೈಸೂರು ವಿಭಾಗದ ಸಂಚಾಲಕ ಚಂದ್ರಶೇಖರ್ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪ್ರತಿಯೊಬ್ಬರು ಪರಿಸರ ರಕ್ಷಣೆ ಮಾಡಲು ಪಣತೊಡಬೇಕು. ಅರಣ್ಯದಲ್ಲಿ ಭಕ್ತರು ಬಿಸಾಡುವ ಪ್ಲಾಸ್ಟಿಕ್ ನಿಂದ ವನ್ಯಪ್ರಾಣಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಯವರು ಹತ್ತಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು ಸಹ ಪ್ರಯೋಜನವಾಗಿಲ್ಲ. ಕೇವಲ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎರಡು ಟ್ರ್ಯಾಕ್ಟರ್ ನಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ ಮಾಡಲಾಗಿದೆ. ಕೇವಲ ಒಂದು ಕಿಲೋಮೀಟರ್ ನಲ್ಲಿ ಇಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳಿದ್ದರೆ ಇನ್ನು ಶ್ರೀ ಕ್ಷೇತ್ರದ ಸುತ್ತ ಎಷ್ಟು ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಿಗಲಿದೆ ಎಂಬುದು ಪ್ರಶ್ನೆಯಾಗಿದೆ. ಆದ್ದರಿಂದ ಮಲೆ ಮಾದೇಶ್ವರ ಭಕ್ತರು ಅರಣ್ಯಕ್ಕೆ ಪ್ಲಾಸ್ಟಿಕ್ ವಾಟರ್ ಬಾಟಲ್ ಸೇರಿದಂತೆ ಇತರೆ ಪ್ಲಾಸ್ಟಿಕ್ ಆಹಾರ ತಿನಿಸು ಪದಾರ್ಥಗಳನ್ನು ಅರಣ್ಯಕ್ಕೆ ತೆಗೆದುಕೊಂಡು ಹೋಗಿ ಬಿಸಾಡಬಾರದು ಎಂದು ಭಕ್ತರಲ್ಲಿ ಮನವಿ ಮಾಡಿದ್ದಾರೆ.
ಸ್ವಚ್ಛತಾ ಕಾರ್ಯದಲ್ಲಿ ಯುವ ಬ್ರಿಗೇಡ್ ನ ಸದಸ್ಯರುಗಳಾದ ಯೋಗೇಶ್, ಗೋಪಾಲ್, ಪ್ರಜ್ವಲ್, ರವಿ, ಶ್ರೀನಿವಾಸ್, ನಿತಿನ್, ಕೀರ್ತಿ, ಮಹದೇವಸ್ವಾಮಿ, ಮಂಜುನಾಥ್, ಪ್ರಶಾಂತ್, ಪ್ರಮೋದ್,ಚಂದ್ರಶೇಖರ್ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಸ್ವಯಂ ಕಾರ್ಯಕರ್ತರು ಭಾಗಿಯಾಗಿದ್ದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…