ಜಿಲ್ಲೆಗಳು

ಮಲೆ ಮಹದೇಶ್ವರ ಬೆಟ್ಟ : ಜಿಲ್ಲಾಧಿಕಾರಿಗಳಿಂದ ವಿವಿಧ ಕಾಮಗಾರಿ ಪರಿಶೀಲನೆ

ಹನೂರು: ಮುಂದಿನ ತಿಂಗಳು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಯನ್ನು ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆಗಮಿಸುತ್ತಿರುವುದರಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು.ಪ್ರಗತಿಯಲ್ಲಿರುವ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಭಕ್ತರ ಅನುಕೂಲಕ್ಕೆ ಕಲ್ಪಿಸಬೇಕು. ಟೆಂಡರ್ ಪೂರ್ಣಗೊಂಡು ಕಾಮಗಾರಿ ಇನ್ನೂ ಪ್ರಾರಂಭಿಸಿದೇ ಇರುವ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದುಕೊಂಡು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಬೇಕು. ಯಾವುದಾದರೂ ತೊಡಕುಗಳಿದ್ದರೆ ನೇರವಾಗಿ ಸಂಪರ್ಕಿಸಿ ನಿಮಗೆ ಬಂದೋಬಸ್ತ್ ಅವಶ್ಯಕತೆ ಇದ್ದರೆ ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಚರ್ಚಿಸಿ ನಿಮ್ಮ ಕಾಮಗಾರಿಗೆ ಅನುವು ಮಾಡಿಕೊಡುತ್ತೇನೆ ಎಂದು ತಿಳಿಸಿದರು .

108ಅಡಿ ಮಲೆ ಮಹದೇಶ್ವರರ ಪ್ರತಿಮೆ,512 ವಸತಿಗೃಹ ಎಸ್ ಎಸ್ ಡಿಪಿ ಯುಜಿಡಿ, ತಿರುಪತಿ ಮಾದರಿಯ ದರ್ಶನದ ಸರತಿ ಸಾಲು, ಡಾರ್ಮೆಟರಿ, ಲಡ್ಡು ಮನೆ, ಕಲ್ಯಾಣಿ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಇಇ ವಿನಯ್, ನಿವೃತ್ತ ಅಭಿಯಂತರ ಕುಮಾರ್ ,ಎಇಇ ಸದಾಶಿವಮೂರ್ತಿ, ಎಇ ಮಹದೇವಸ್ವಾಮಿ,ತಹಸಿಲ್ದಾರ್ ಆನಂದಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago