Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಯುವ ಬ್ರಿಗೇಡ್ ಮೈಸೂರು ವತಿಯಿಂದ ಅಂತರಗಂಗೆಯಲ್ಲಿ ಸ್ವಚ್ಚತಾ ಕಾರ್ಯ

ಹನೂರು: ಯುವ ಬ್ರಿಗೇಡ್ ಮೈಸೂರು ವಿಭಾಗದ ವತಿಯಿಂದ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸ್ವಚ್ಛದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಸದಸ್ಯ ಚಂದ್ರಶೇಖರ್ ಮಾತನಾಡಿ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ಅಂತರಗಂಗೆ ಮಲಿನ ವಾಗಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು. ಈ ವರದಿ ನೋಡಿದ ಮೇಲೆ ನಮ್ಮ ಯುವ ಬ್ರಿಗೇಡ್ ನ ವತಿಯಿಂದ ಲಕ್ಷಾಂತರ ಭಕ್ತಾದಿಗಳು ಬರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯನ್ನು ಸ್ವಚ್ಛಗೊಳಿಸಬೇಕೆಂಬ ದ್ಯೇಯೋದ್ದೇಶದಿಂದ ಎರಡು ದಿನಗಳ ಕಾಲ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಇದಲ್ಲದೆ ದೇವಾಲಯದ ವರ ಆವರಣದಲ್ಲಿ ಪ್ಲಾಸ್ಟಿಕ್ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ನ ಸದಸ್ಯರುಗಳಾದ ಪ್ರಶಾಂತ್ ಪ್ರಮೋದ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!