ಹನೂರು : ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಮುಂಭಾಗ ಭಕ್ತರು ಹಾಗೂ ಸಾರ್ವಜನಿಕರು ಚಪ್ಪಲಿಗಳನ್ನು ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ, ಚಾಮುಂಡಿ ಬೆಟ್ಟ ನಂಜನಗೂಡು ಸೇರಿದಂತೆ ಇನ್ನಿತರ ದೇವಾಲಯಗಳಲ್ಲಿ ಭಕ್ತರು ಚಪ್ಪಲಿ ಬಿಡುವುದಕ್ಕಾಗಿ ಕೌಂಟರ್ ಗಳನ್ನು ತೆಗೆದಿದ್ದಾರೆ. ಅದೇ ರೀತಿ ಮಲೆ ಮಾದೇಶ್ವರ ಬೆಟ್ಟದ ದೇವಾಲಯದ ಸಮೀಪ ಒಂದು ಚಪ್ಪಲಿ ಕೌಂಟರ್ ಗಳನ್ನು ತೆರೆಯಲಾಗಿದೆ. ಜಾತ್ರಾ ಮಹೋತ್ಸವ ಹಬ್ಬ ಹರಿದಿನಗಳು,ಅಮಾವಾಸ್ಯೆ ಪೂಜೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಬರುವಂತಹ ಭಕ್ತಾದಿಗಳಿಗೆ ಕೇವಲ ಒಂದೇ ಒಂದು ಚಪ್ಪಲಿ ಕೌಂಟರ್ ಇರುವುದರಿಂದ ತೀವ್ರ ತೊಂದರೆ ಆಗುತ್ತಿದೆ ಈ ಹಿನ್ನೆಲೆ ದೇವಾಲಯದ ಆವರಣ ಹಾಗೂ ರಂಗಮಂದಿರದ ಮುಂಭಾಗ ಚಪ್ಪಲಿಗಳನ್ನು ಬಿಡುತ್ತಿರುವುದರಿಂದ ಭಕ್ತರಿಗೆ ಕಿರಿಕಿರಿ ಉಂಟಾಗುತ್ತಿದೆ ಆದ್ದರಿಂದ ಸಂಬಂಧಪಟ್ಟ ಪ್ರಾಧಿಕಾರದ ಅಧಿಕಾರಿಗಳು ಹೆಚ್ಚು ಚಪ್ಪಲಿ ಕೌಂಟರ್ ತೆರೆದು ಅನುಕೂಲ ಕಲ್ಪಿಸಿ ಎಲ್ಲೆಂದರಲ್ಲಿ ಚಪ್ಪಾಲಿ ಬಿಡದಂತೆ ಕ್ರಮವಹಿಸಬೇಕೆಂದು ಭಕ್ತರು ಆಗ್ರಹಿಸಿದ್ದಾರೆ.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…