ಜಿಲ್ಲೆಗಳು

ಮಲೆಮಹದೇಶ್ವರ ಬೆಟ್ಟ ಮುಖ್ಯದ್ವಾರ ರಸ್ತೆ ಅಭಿವೃದ್ಧಿಗೆ ಕ್ರಮ : ಸಚಿವ ಆನಂದ್ ಸಿಂಗ್

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರ ಸಂಪರ್ಕಿಸುವ ರಸ್ತೆ ಕಾಮಗಾರಿಗೆ 2ಕೋಟಿ ಅನುದಾನ ನೀಡಲಾಗಿದೆ ಎಂದು ಪ್ರವಾಸೋದ್ಯಮ,ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಆನಂದ್ ಸಿಂಗ್ ಉತ್ತರಿಸಿದರು.

ಬೆಂಗಳೂರಿನ ವಿಧಾನಸಭೆ ಕಲಾಪದಲ್ಲಿ ಹನೂರು ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ ಉತ್ತರಿಸಿ ಮಲೆ ಮಾದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರಕ್ಕೆ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ 2ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿರುತ್ತದೆ.ಈ ಕಾಮಗಾರಿಗೆ ಹತ್ತು 3ಇಪ್ಪತ್ತ ರಂದು ಆಡಳಿತಾತ್ಮಕ ಅನುಮೋದನೆ ನೀಡಿ 2ಕೋಟೆಗಳನ್ನು ವ್ಯವಸ್ಥಾಪಕ ನಿರ್ದೇಶಕರು ಕೆಆರ್ ಐಡಿಎಲ್ ಬೆಂಗಳೂರು ರವರಿಗೆ ಬಿಡುಗಡೆ ಮಾಡಲಾಗಿರುತ್ತದೆ ಕಾಮಗಾರಿ ಪ್ರಾರಂಭಿಸಬೇಕಿದೆ ಎಂದು ಉತ್ತರಿಸಿದ್ದಾರೆ. ಇದಲ್ಲದೆ ಹನೂರು ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ, ಹೊಗೇನಕಲ್ ಫಾಲ್ಸ್, ಗೋಪಿನಾಥಮ್, ಪಾಲಾರ್ ಗಡಿ ಹಾಗೂ ಒಡೆಯರಪಾಳ್ಯ ಹೊನ್ನಮೇಟಿ ಅತ್ತಿಖಾನೆ ಸೇರಿದಂತೆ 5 ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು ಇದರ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago