ಜಿಲ್ಲೆಗಳು

ಮಲೆಯಾಳ ಸಮಾಜದಿಂದ ವೈವಿದ್ಯಮಯ ಓಣಂ ಆಚರಣೆ

ಚಾಮರಾಜನಗರ: ಜಿಲ್ಲಾ ಮಲೆಯಾಳ ಸಮಾಜದಿಂದ ಜೋಡಿರಸ್ತೆಯ ಸಂತ ಪೌಲರ ಸಮುದಾಯ ಭವನದಲ್ಲಿ ವೈವಿದ್ಯಮಯ ಓಣಂ ಆಚರಣೆ ನಡೆಯಿತು.ಆಕರ್ಷಕ ಹೂವಿನ ರಂಗೋಲಿ ಸಿಂಗಾರಿಮೇಳ ಓಣಂಸಾಧ್ಯ ಪ್ರಮುಖ ಆಕರ್ಷಣೆ ಯಾಗಿತ್ತು .

ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಸಮಾಜದ ಅದ್ಯಕ್ಷ ರಾಜು ವರ್ಗೀಸ್ ೧೯೭೫ ರಲ್ಲಿ ನಾನು ಚಾಮರಾಜನಗರಕ್ಕೆ ಬಂದಾಗ ಒಂದೆರಡು ಮಲೆಯಾಳಿ ಕುಟುಂಬಗಳಿದ್ದವು ಈಗ ಬಹಳಷ್ಟು ಕುಟುಂಬಗಳಿವೆ ಎಲ್ಲರನ್ನು ಸಂಘಟಿಸುವ ಗುರುತರ ಜವಾಬ್ದಾರಿ ಇದೆ ನಾವು ಮೂಲತಃ ಕೇರಳದವರಾದರೂ ಈಗ ಜಿಲ್ಲೆಯಲ್ಲಿ ನೆಲೆಸಿದ್ದೇವೆ ಕನ್ನಡ ಭಾಷೆ ಕಲಿಯಬೇಕು ಕನ್ನಡ ಸಂಸ್ಕೃತಿ ಅಳವಡಿಸಿಕೊಳ್ಳಬೇಕು ಕನ್ನಡಿಗರೊಂದಿಗೆ ಉತ್ತಮ ಬಾಂಧವ್ಯ ಬೆಳವಳಿಸಿಕೊಳ್ಳಬೇಕು ಎಂದರು.

೨೦೦೮ ರಲ್ಲಿ ಜಿಲ್ಲಾ ಮಲೆಯಾಳ ಸಮಾಜ ಸ್ಥಾಪನೆಯಾಯಿತು ಆದರೆ ೨೦೧೮ ರಲ್ಲಿ ನೋಂದಣಿ ಯಾಯಿತು ಅಲ್ಲಿಂದ ಪ್ರತಿವರ್ಷ ಓಣಂ ಆಚರಿಸಿಕೊಂಡು ಬರುತ್ತಿದ್ದೇವೆ. ಕಳೆದ ನಾಲ್ಕು ವರ್ಷಗಳಿಂದ ಕೋವಿಡ್ ಮತ್ತು ವಯನಾಡ್ ನಲ್ಲಿ ಮನೆಗಳು ಕುಸಿದು ಅನೇಕರು ಮರಣ ಹೊಂದಿದ್ದರಿಂದ ಆಚರಿಸಲು ಸಾಧ್ಯ ವಾಗಲಿಲ್ಲ ಈ ವರ್ಷ ಅದ್ದೂರಿಯಾಗಿ ಆಚರಿಸುತ್ತಿದ್ದೇವೆ ನಾವು ಕೆಲವು ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದರು.

ಮೊಟ್ಟಮೊದಲಿಗೆ ಶವಸಾಗಾಣಿಕೆ ವಾಹನವನ್ನು ಪರಿಚಯಿಸಿ ಎಲ್ಲಾ ಸಮಾಜದವರಿಗೂ ವಿಶೇಷ ವಾಗಿ ಬಡವರಿಗೆ ಉಚಿತವಾಗಿ ಒದಗಿಸಿಕೊಟ್ಟಿದ್ದೇವೆ ಇತ್ತೀಚಿಗೆ ಯಾರೂ ದಿಕ್ಕಿಲ್ಕದೆ ಮಳೆಯಲ್ಲಿ ನೆನೆಯುತ್ತಿದ್ದ ವೃದ್ದೆಯೊಬ್ಬರಿಗೆ ಮೂಡಲಧ್ವನಿ ವೃದ್ದಾಶ್ರಮದಲ್ಲಿ ಆಸರೆ ಒದಗಿಸಲಾಯಿತು ಎಂದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆಗಾಗಿ ಮೂಡಲಧ್ವನಿ ವೃದ್ದಾಶ್ರಮದ ಶಂಕರ್ ಹಾಗೂ ಬಹುವರ್ಷಗಳಿಂದ ಜಿಲ್ಲೆಯಲ್ಲಿ ನೆಲೆಸಿರುವ ಗೋಪಕುಮಾರ್ ಸ್ವಾಮಿನಾಥನ್ ಸ್ವಾಮಿನಾಥ ಅಯ್ಯರ್ ಸುಬ್ರಹ್ಮಣ್ಯ ವೇಣುಗೋಪಾಲ್ ರಾಜಮ್ಮ ಗಂಗಾಧರನ್ ಶಾಂತಮ್ಮ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾರ್ಯದರ್ಶಿ ಸೆಬಾಸ್ಟಿಯನ್ ಜೋಕಿಂ ಸಿ ಆರ್ ಹರೀಶ್ ಕೆ ಕೆ ಮೊಹಮ್ಮದ್ ಆಲಿ ಸುಧಾ ರವಿ ಇದ್ದರು ಓಣಂ ವಿಶೇಷ ನೃತ್ಯ ಹಾಗೂ ಸಿಂಗಾರಿ ಮೇಳ ಆಯೋಜಿಸಲಾಗಿತ್ತು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago