ಜಿಲ್ಲೆಗಳು

ಮಲೆಯಾಳ ಸಮಾಜದಿಂದ ವೈವಿದ್ಯಮಯ ಓಣಂ ಆಚರಣೆ

ಚಾಮರಾಜನಗರ: ಜಿಲ್ಲಾ ಮಲೆಯಾಳ ಸಮಾಜದಿಂದ ಜೋಡಿರಸ್ತೆಯ ಸಂತ ಪೌಲರ ಸಮುದಾಯ ಭವನದಲ್ಲಿ ವೈವಿದ್ಯಮಯ ಓಣಂ ಆಚರಣೆ ನಡೆಯಿತು.ಆಕರ್ಷಕ ಹೂವಿನ ರಂಗೋಲಿ ಸಿಂಗಾರಿಮೇಳ ಓಣಂಸಾಧ್ಯ ಪ್ರಮುಖ ಆಕರ್ಷಣೆ ಯಾಗಿತ್ತು .

ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಸಮಾಜದ ಅದ್ಯಕ್ಷ ರಾಜು ವರ್ಗೀಸ್ ೧೯೭೫ ರಲ್ಲಿ ನಾನು ಚಾಮರಾಜನಗರಕ್ಕೆ ಬಂದಾಗ ಒಂದೆರಡು ಮಲೆಯಾಳಿ ಕುಟುಂಬಗಳಿದ್ದವು ಈಗ ಬಹಳಷ್ಟು ಕುಟುಂಬಗಳಿವೆ ಎಲ್ಲರನ್ನು ಸಂಘಟಿಸುವ ಗುರುತರ ಜವಾಬ್ದಾರಿ ಇದೆ ನಾವು ಮೂಲತಃ ಕೇರಳದವರಾದರೂ ಈಗ ಜಿಲ್ಲೆಯಲ್ಲಿ ನೆಲೆಸಿದ್ದೇವೆ ಕನ್ನಡ ಭಾಷೆ ಕಲಿಯಬೇಕು ಕನ್ನಡ ಸಂಸ್ಕೃತಿ ಅಳವಡಿಸಿಕೊಳ್ಳಬೇಕು ಕನ್ನಡಿಗರೊಂದಿಗೆ ಉತ್ತಮ ಬಾಂಧವ್ಯ ಬೆಳವಳಿಸಿಕೊಳ್ಳಬೇಕು ಎಂದರು.

೨೦೦೮ ರಲ್ಲಿ ಜಿಲ್ಲಾ ಮಲೆಯಾಳ ಸಮಾಜ ಸ್ಥಾಪನೆಯಾಯಿತು ಆದರೆ ೨೦೧೮ ರಲ್ಲಿ ನೋಂದಣಿ ಯಾಯಿತು ಅಲ್ಲಿಂದ ಪ್ರತಿವರ್ಷ ಓಣಂ ಆಚರಿಸಿಕೊಂಡು ಬರುತ್ತಿದ್ದೇವೆ. ಕಳೆದ ನಾಲ್ಕು ವರ್ಷಗಳಿಂದ ಕೋವಿಡ್ ಮತ್ತು ವಯನಾಡ್ ನಲ್ಲಿ ಮನೆಗಳು ಕುಸಿದು ಅನೇಕರು ಮರಣ ಹೊಂದಿದ್ದರಿಂದ ಆಚರಿಸಲು ಸಾಧ್ಯ ವಾಗಲಿಲ್ಲ ಈ ವರ್ಷ ಅದ್ದೂರಿಯಾಗಿ ಆಚರಿಸುತ್ತಿದ್ದೇವೆ ನಾವು ಕೆಲವು ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದರು.

ಮೊಟ್ಟಮೊದಲಿಗೆ ಶವಸಾಗಾಣಿಕೆ ವಾಹನವನ್ನು ಪರಿಚಯಿಸಿ ಎಲ್ಲಾ ಸಮಾಜದವರಿಗೂ ವಿಶೇಷ ವಾಗಿ ಬಡವರಿಗೆ ಉಚಿತವಾಗಿ ಒದಗಿಸಿಕೊಟ್ಟಿದ್ದೇವೆ ಇತ್ತೀಚಿಗೆ ಯಾರೂ ದಿಕ್ಕಿಲ್ಕದೆ ಮಳೆಯಲ್ಲಿ ನೆನೆಯುತ್ತಿದ್ದ ವೃದ್ದೆಯೊಬ್ಬರಿಗೆ ಮೂಡಲಧ್ವನಿ ವೃದ್ದಾಶ್ರಮದಲ್ಲಿ ಆಸರೆ ಒದಗಿಸಲಾಯಿತು ಎಂದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆಗಾಗಿ ಮೂಡಲಧ್ವನಿ ವೃದ್ದಾಶ್ರಮದ ಶಂಕರ್ ಹಾಗೂ ಬಹುವರ್ಷಗಳಿಂದ ಜಿಲ್ಲೆಯಲ್ಲಿ ನೆಲೆಸಿರುವ ಗೋಪಕುಮಾರ್ ಸ್ವಾಮಿನಾಥನ್ ಸ್ವಾಮಿನಾಥ ಅಯ್ಯರ್ ಸುಬ್ರಹ್ಮಣ್ಯ ವೇಣುಗೋಪಾಲ್ ರಾಜಮ್ಮ ಗಂಗಾಧರನ್ ಶಾಂತಮ್ಮ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾರ್ಯದರ್ಶಿ ಸೆಬಾಸ್ಟಿಯನ್ ಜೋಕಿಂ ಸಿ ಆರ್ ಹರೀಶ್ ಕೆ ಕೆ ಮೊಹಮ್ಮದ್ ಆಲಿ ಸುಧಾ ರವಿ ಇದ್ದರು ಓಣಂ ವಿಶೇಷ ನೃತ್ಯ ಹಾಗೂ ಸಿಂಗಾರಿ ಮೇಳ ಆಯೋಜಿಸಲಾಗಿತ್ತು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

16 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago