ಜಿಲ್ಲೆಗಳು

ಮಲೆಯಾಳ ಸಮಾಜದಿಂದ ವೈವಿದ್ಯಮಯ ಓಣಂ ಆಚರಣೆ

ಚಾಮರಾಜನಗರ: ಜಿಲ್ಲಾ ಮಲೆಯಾಳ ಸಮಾಜದಿಂದ ಜೋಡಿರಸ್ತೆಯ ಸಂತ ಪೌಲರ ಸಮುದಾಯ ಭವನದಲ್ಲಿ ವೈವಿದ್ಯಮಯ ಓಣಂ ಆಚರಣೆ ನಡೆಯಿತು.ಆಕರ್ಷಕ ಹೂವಿನ ರಂಗೋಲಿ ಸಿಂಗಾರಿಮೇಳ ಓಣಂಸಾಧ್ಯ ಪ್ರಮುಖ ಆಕರ್ಷಣೆ ಯಾಗಿತ್ತು .

ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಸಮಾಜದ ಅದ್ಯಕ್ಷ ರಾಜು ವರ್ಗೀಸ್ ೧೯೭೫ ರಲ್ಲಿ ನಾನು ಚಾಮರಾಜನಗರಕ್ಕೆ ಬಂದಾಗ ಒಂದೆರಡು ಮಲೆಯಾಳಿ ಕುಟುಂಬಗಳಿದ್ದವು ಈಗ ಬಹಳಷ್ಟು ಕುಟುಂಬಗಳಿವೆ ಎಲ್ಲರನ್ನು ಸಂಘಟಿಸುವ ಗುರುತರ ಜವಾಬ್ದಾರಿ ಇದೆ ನಾವು ಮೂಲತಃ ಕೇರಳದವರಾದರೂ ಈಗ ಜಿಲ್ಲೆಯಲ್ಲಿ ನೆಲೆಸಿದ್ದೇವೆ ಕನ್ನಡ ಭಾಷೆ ಕಲಿಯಬೇಕು ಕನ್ನಡ ಸಂಸ್ಕೃತಿ ಅಳವಡಿಸಿಕೊಳ್ಳಬೇಕು ಕನ್ನಡಿಗರೊಂದಿಗೆ ಉತ್ತಮ ಬಾಂಧವ್ಯ ಬೆಳವಳಿಸಿಕೊಳ್ಳಬೇಕು ಎಂದರು.

೨೦೦೮ ರಲ್ಲಿ ಜಿಲ್ಲಾ ಮಲೆಯಾಳ ಸಮಾಜ ಸ್ಥಾಪನೆಯಾಯಿತು ಆದರೆ ೨೦೧೮ ರಲ್ಲಿ ನೋಂದಣಿ ಯಾಯಿತು ಅಲ್ಲಿಂದ ಪ್ರತಿವರ್ಷ ಓಣಂ ಆಚರಿಸಿಕೊಂಡು ಬರುತ್ತಿದ್ದೇವೆ. ಕಳೆದ ನಾಲ್ಕು ವರ್ಷಗಳಿಂದ ಕೋವಿಡ್ ಮತ್ತು ವಯನಾಡ್ ನಲ್ಲಿ ಮನೆಗಳು ಕುಸಿದು ಅನೇಕರು ಮರಣ ಹೊಂದಿದ್ದರಿಂದ ಆಚರಿಸಲು ಸಾಧ್ಯ ವಾಗಲಿಲ್ಲ ಈ ವರ್ಷ ಅದ್ದೂರಿಯಾಗಿ ಆಚರಿಸುತ್ತಿದ್ದೇವೆ ನಾವು ಕೆಲವು ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ ಎಂದರು.

ಮೊಟ್ಟಮೊದಲಿಗೆ ಶವಸಾಗಾಣಿಕೆ ವಾಹನವನ್ನು ಪರಿಚಯಿಸಿ ಎಲ್ಲಾ ಸಮಾಜದವರಿಗೂ ವಿಶೇಷ ವಾಗಿ ಬಡವರಿಗೆ ಉಚಿತವಾಗಿ ಒದಗಿಸಿಕೊಟ್ಟಿದ್ದೇವೆ ಇತ್ತೀಚಿಗೆ ಯಾರೂ ದಿಕ್ಕಿಲ್ಕದೆ ಮಳೆಯಲ್ಲಿ ನೆನೆಯುತ್ತಿದ್ದ ವೃದ್ದೆಯೊಬ್ಬರಿಗೆ ಮೂಡಲಧ್ವನಿ ವೃದ್ದಾಶ್ರಮದಲ್ಲಿ ಆಸರೆ ಒದಗಿಸಲಾಯಿತು ಎಂದರು.

ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆಗಾಗಿ ಮೂಡಲಧ್ವನಿ ವೃದ್ದಾಶ್ರಮದ ಶಂಕರ್ ಹಾಗೂ ಬಹುವರ್ಷಗಳಿಂದ ಜಿಲ್ಲೆಯಲ್ಲಿ ನೆಲೆಸಿರುವ ಗೋಪಕುಮಾರ್ ಸ್ವಾಮಿನಾಥನ್ ಸ್ವಾಮಿನಾಥ ಅಯ್ಯರ್ ಸುಬ್ರಹ್ಮಣ್ಯ ವೇಣುಗೋಪಾಲ್ ರಾಜಮ್ಮ ಗಂಗಾಧರನ್ ಶಾಂತಮ್ಮ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾರ್ಯದರ್ಶಿ ಸೆಬಾಸ್ಟಿಯನ್ ಜೋಕಿಂ ಸಿ ಆರ್ ಹರೀಶ್ ಕೆ ಕೆ ಮೊಹಮ್ಮದ್ ಆಲಿ ಸುಧಾ ರವಿ ಇದ್ದರು ಓಣಂ ವಿಶೇಷ ನೃತ್ಯ ಹಾಗೂ ಸಿಂಗಾರಿ ಮೇಳ ಆಯೋಜಿಸಲಾಗಿತ್ತು.

andolanait

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

2 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

2 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

2 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

3 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

3 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

4 hours ago