ಹನೂರು: ಹಿರಿಯ ರಾಜಕೀಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನೂತನ ಕಾಂಗ್ರೆಸ್ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಅಜ್ಜಿಪುರ ಹಾಗೂ ಬಸಪ್ಪನದೊಡ್ಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾಜಿ ತಾ.ಪಂ.ಅಧ್ಯಕ್ಷ ಮುರುಡೇಶ್ವರಸ್ವಾಮಿ ಮಾತನಾಡಿ, ಈ ನಾಡು ದೇಶ ಕಂಡ ಅಪರೂಪದ ರಾಜಕೀಯ ಮುತ್ಸದಿ, ಕರ್ನಾಟಕ ಸುಪುತ್ರ ಮಲ್ಲಿಕಾರ್ಜುನ್ ಖರ್ಗೆ ಅವರು ನೂತನ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮೆಲ್ಲರ ಸೌಭಾಗ್ಯ. 9 ಬಾರಿ ಶಾಸಕರಾಗಿ ಹಾಗೂ 2 ಬಾರಿ ಸಂಸದರಾಗಿ ಆಯ್ಕೆಯಾಗಿ ರಾಜ್ಯ ಮತ್ತು ಕೇಂದ್ರದಲ್ಲಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಎಂಟು ಸಾವಿರ ಮತಗಳನ್ನು ಪಡೆಯುವ ಮೂಲಕ 37ನೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.
ಇದು ಅವರ ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆ ಸಂದ ಗೌರವವಾಗಿದೆ. ಕರ್ನಾಟಕದಲ್ಲಿ ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಗಾದಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೊರಕಿರುವುದು ಸಂತಸದ ವಿಚಾರ. ಅವರ ನಾಯಕತ್ವದಲ್ಲಿ ರಾಜ್ಯ, ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸದೃಢವಾಗಿ ಬೆಳೆಯುತ್ತದೆ ಎಂಬ ವಿಶ್ವಾಸವಿದೆ. ದೇವರು ಅವರಿಗೆ ಇನ್ನೂ ಹೆಚ್ಚಿನ ಆಯಸ್ಸು ಆರೋಗ್ಯ ನೀಡಿ ಕಾಪಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿ.ನಾಗರಾಜು, ಕಾಳೇಗೌಡ, ಮುನಿಗೌಡ, ವಿ.ಕೆ.ರಮೇಶ್, ಪಚ್ಚೇಗೌಡ ಮಾದೇವು, ಗ್ರಾ.ಪಂ. ಸದಸ್ಯ ಭೈರಾಜ್, ಲೋಕೇಶ್, ಚೆನ್ನಮಾದೇಗೌಡ, ಶಿವಮೂರ್ತಿ ಇನ್ನಿತರರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…