ಜಿಲ್ಲೆಗಳು

ಮಲ್ಲಿಕಾರ್ಜುನ ಖರ್ಗೆಗೆ ಅಧ್ಯಕ್ಷ ಸ್ಥಾನ : ಸಿಹಿ ಹಂಚಿ ಸಂಭ್ರಮಾಚರಣೆ

ಹನೂರು: ಹಿರಿಯ ರಾಜಕೀಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನೂತನ ಕಾಂಗ್ರೆಸ್ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಅಜ್ಜಿಪುರ ಹಾಗೂ ಬಸಪ್ಪನದೊಡ್ಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಮಾಜಿ ತಾ.ಪಂ.ಅಧ್ಯಕ್ಷ ಮುರುಡೇಶ್ವರಸ್ವಾಮಿ ಮಾತನಾಡಿ, ಈ ನಾಡು ದೇಶ ಕಂಡ ಅಪರೂಪದ ರಾಜಕೀಯ ಮುತ್ಸದಿ, ಕರ್ನಾಟಕ ಸುಪುತ್ರ ಮಲ್ಲಿಕಾರ್ಜುನ್ ಖರ್ಗೆ ಅವರು ನೂತನ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಮ್ಮೆಲ್ಲರ ಸೌಭಾಗ್ಯ. 9 ಬಾರಿ ಶಾಸಕರಾಗಿ ಹಾಗೂ 2 ಬಾರಿ ಸಂಸದರಾಗಿ ಆಯ್ಕೆಯಾಗಿ ರಾಜ್ಯ ಮತ್ತು ಕೇಂದ್ರದಲ್ಲಿ ಉನ್ನತ ಸ್ಥಾನಮಾನಗಳನ್ನು ಅಲಂಕರಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರು ಎಂಟು ಸಾವಿರ ಮತಗಳನ್ನು ಪಡೆಯುವ ಮೂಲಕ 37ನೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ.

ಇದು ಅವರ ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆ ಸಂದ ಗೌರವವಾಗಿದೆ. ಕರ್ನಾಟಕದಲ್ಲಿ ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಗಾದಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೊರಕಿರುವುದು ಸಂತಸದ ವಿಚಾರ. ಅವರ ನಾಯಕತ್ವದಲ್ಲಿ ರಾಜ್ಯ, ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸದೃಢವಾಗಿ ಬೆಳೆಯುತ್ತದೆ ಎಂಬ ವಿಶ್ವಾಸವಿದೆ. ದೇವರು ಅವರಿಗೆ ಇನ್ನೂ ಹೆಚ್ಚಿನ ಆಯಸ್ಸು ಆರೋಗ್ಯ ನೀಡಿ ಕಾಪಾಡಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸಿ.ನಾಗರಾಜು, ಕಾಳೇಗೌಡ, ಮುನಿಗೌಡ, ವಿ.ಕೆ.ರಮೇಶ್, ಪಚ್ಚೇಗೌಡ ಮಾದೇವು, ಗ್ರಾ.ಪಂ. ಸದಸ್ಯ ಭೈರಾಜ್, ಲೋಕೇಶ್, ಚೆನ್ನಮಾದೇಗೌಡ, ಶಿವಮೂರ್ತಿ ಇನ್ನಿತರರಿದ್ದರು.

andolanait

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

11 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

13 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

17 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

21 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 day ago