ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಯುವ ನಾಯಕ ರಾಹುಲ್ಗಾಂಧಿ ಪರ ಜೈಕಾರ ಹಾಕಿದರು.
ಯುವ ಮುಖಂಡ ಮಹೇಶ್ ಕುದರ್ ಈ ಸಂದರ್ಭದಲ್ಲಿ ಮಾತನಾಡಿ,ಖರ್ಗೆ ಅವರು ಅಧ್ಯಕ್ಷರಾಗಿಆಯ್ಕೆ
ಯಾಗಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ನಿಷ್ಠಾವಂತ ನಾಯಕರಾದ ಅವರ ನೇತೃತ್ವದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್ಗೆ ಹೊಸ ಹುರುಪು ತಂದಿದ್ದು ರಾಜ್ಯದಲ್ಲಿ ಅಧಿಕಾರ ಕಾಂಗ್ರೆಸ್ ಹಿಡಿಯಲಿದೆ. ಯುವಕರಿಗೆ ಖರ್ಗೆ ಸ್ಪೂರ್ತಿ ಯ ಚಿಲುಮೆಯಾಗಿದ್ದಾರೆ ಎಂದರು.
ಮುಖಂಡರಾದ ನಲ್ಲೂರು ಮಹದೇವಸ್ವಾಮಿ( ಮಾಲು), ಸಿ.ಕೆ. ರವಿಕುಮಾರ್, ಚನ್ನಪ್ಪ, ಸಿ.ಶ್ರೀನಿವಾಸ್, ಮಹದೇವಸ್ವಾಮಿ, ಶಿವಸ್ವಾಮಿ, ಮಲೆಯೂರು ಸೋಮಯ್ಯ ಮೊದಲಾದವರು ಇದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…