ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಯುವ ನಾಯಕ ರಾಹುಲ್ಗಾಂಧಿ ಪರ ಜೈಕಾರ ಹಾಕಿದರು.
ಯುವ ಮುಖಂಡ ಮಹೇಶ್ ಕುದರ್ ಈ ಸಂದರ್ಭದಲ್ಲಿ ಮಾತನಾಡಿ,ಖರ್ಗೆ ಅವರು ಅಧ್ಯಕ್ಷರಾಗಿಆಯ್ಕೆ
ಯಾಗಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ನಿಷ್ಠಾವಂತ ನಾಯಕರಾದ ಅವರ ನೇತೃತ್ವದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್ಗೆ ಹೊಸ ಹುರುಪು ತಂದಿದ್ದು ರಾಜ್ಯದಲ್ಲಿ ಅಧಿಕಾರ ಕಾಂಗ್ರೆಸ್ ಹಿಡಿಯಲಿದೆ. ಯುವಕರಿಗೆ ಖರ್ಗೆ ಸ್ಪೂರ್ತಿ ಯ ಚಿಲುಮೆಯಾಗಿದ್ದಾರೆ ಎಂದರು.
ಮುಖಂಡರಾದ ನಲ್ಲೂರು ಮಹದೇವಸ್ವಾಮಿ( ಮಾಲು), ಸಿ.ಕೆ. ರವಿಕುಮಾರ್, ಚನ್ನಪ್ಪ, ಸಿ.ಶ್ರೀನಿವಾಸ್, ಮಹದೇವಸ್ವಾಮಿ, ಶಿವಸ್ವಾಮಿ, ಮಲೆಯೂರು ಸೋಮಯ್ಯ ಮೊದಲಾದವರು ಇದ್ದರು.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…