ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಯುವ ನಾಯಕ ರಾಹುಲ್ಗಾಂಧಿ ಪರ ಜೈಕಾರ ಹಾಕಿದರು.
ಯುವ ಮುಖಂಡ ಮಹೇಶ್ ಕುದರ್ ಈ ಸಂದರ್ಭದಲ್ಲಿ ಮಾತನಾಡಿ,ಖರ್ಗೆ ಅವರು ಅಧ್ಯಕ್ಷರಾಗಿಆಯ್ಕೆ
ಯಾಗಿರುವುದು ನಮ್ಮೆಲ್ಲರಿಗೂ ಸಂತಸ ತಂದಿದೆ. ನಿಷ್ಠಾವಂತ ನಾಯಕರಾದ ಅವರ ನೇತೃತ್ವದಲ್ಲಿ ರಾಷ್ಟ್ರದಲ್ಲಿ ಕಾಂಗ್ರೆಸ್ ಸದೃಢವಾಗಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಅವರ ಆಯ್ಕೆಯು ರಾಜ್ಯ ಕಾಂಗ್ರೆಸ್ಗೆ ಹೊಸ ಹುರುಪು ತಂದಿದ್ದು ರಾಜ್ಯದಲ್ಲಿ ಅಧಿಕಾರ ಕಾಂಗ್ರೆಸ್ ಹಿಡಿಯಲಿದೆ. ಯುವಕರಿಗೆ ಖರ್ಗೆ ಸ್ಪೂರ್ತಿ ಯ ಚಿಲುಮೆಯಾಗಿದ್ದಾರೆ ಎಂದರು.
ಮುಖಂಡರಾದ ನಲ್ಲೂರು ಮಹದೇವಸ್ವಾಮಿ( ಮಾಲು), ಸಿ.ಕೆ. ರವಿಕುಮಾರ್, ಚನ್ನಪ್ಪ, ಸಿ.ಶ್ರೀನಿವಾಸ್, ಮಹದೇವಸ್ವಾಮಿ, ಶಿವಸ್ವಾಮಿ, ಮಲೆಯೂರು ಸೋಮಯ್ಯ ಮೊದಲಾದವರು ಇದ್ದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…