2,250 ಕೋಟಿ ವೆಚ್ಚದ ಮೆಗಾ ಹಾಲಿನ ಡೈರಿ ಉದ್ಘಾಟನೆ – ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಉಪಸ್ಥಿತಿ.
ಮಂಡ್ಯ: ಇಲ್ಲಿನ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ 2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೆಗಾ ಡೈರಿಯನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ದೀಪ ಬೆಳಗುವ ಮೂಲಕ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿ ವಹಿಸಿದ್ದರು.
ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಜಿಲ್ಲೆಯ ಡೈರಿಗೆ ಈಗಾಗಲೇ ಹಲವಾರು ಪ್ರಶಂಸೆಗಳು ದೊರೆತಿವೆ. ಈಗ ಮೆಗಾ ಡೈರಿ ಲೋಕಾರ್ಪಣೆಗೊಂಡಿದೆ. ಈ ಡೈರಿ 1 ಲಕ್ಷ ಲೀ. ಹಾಲಿನ ಸಂಗ್ರಹಣೆ ಸಾಮರ್ಥ್ಯ ಹೊಂದಿರುವುದು ಇಲ್ಲಿನ ರೈತರಿಗೆ ಇನ್ನೂ ಅನುಕೂಲವಾಗಲಿದೆ. ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡರು ಮೆಗಾ ಡೈರಿ ಉದ್ಘಾಟನೆಗೆ ಬಂದಿದ್ದಾರೆ. ಬೊಮ್ಮಾಯಿ ಅವರು ಹೆಚ್ಚಿನ ಆಸಕ್ತಿವಹಿಸಿ ಹಾಲು ಉತ್ಪಾದಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.ದೇವೇಗೌಡರ ಕಾಲಿಗೆ ನಮಸ್ಕರಿಸಿದ ಬೊಮ್ಮಾಯಿ : ಮೆಗಾ ಡೈರಿ ಉದ್ಘಾಟನೆ ಸಮಾರಂಭ ಕಾರ್ಯಕ್ರಮಕ್ಕೆ ವೇದಿಕೆಗೆ ಆಗಮಿಸುತ್ತಿದ್ದಂತೆ ದೇವೇಗೌಡರ ಕಾಲಿಗೆ ಬಸವರಾಜ ಬೊಮ್ಮಾಯಿ ನಮಸ್ಕರಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಯಶಸ್ಸು ಕಂಡಿದೆ. ಮನೆಯಲ್ಲಿ ಹಾಲು ಕರೆದು ಹಾಕುವ ಮಹಿಳೆಯರಿಗೆ ಧನ್ಯವಾದಗಳು. ಹಾಲಿಗೆ 5 ರೂ ಪ್ರೊತ್ಸಾಹ ಧನ ಕೊಡ್ತಿದ್ದೇವೆ. ಗೆಜ್ಜಲಗೆರೆಯಲ್ಲಿ 1 ಲಕ್ಷ ಸಾಮರ್ಥ್ಯ ಹೊಂದಿರುವ ಮೆಗಾ ಡೈರಿ ಉದ್ಘಾಟನೆ ಮಾಡಲಾಗಿದೆ. ನರೇಂದ್ರ ಮೋದಿ ಅವರು ಸಹಕಾರ ಮಾಡಿ ದೇಶದಲ್ಲಿ ಶಕ್ತಿ ತುಂಬಿದ್ದಾರೆ. ಬೆಂಗಳೂರಿನ ಮೆಗಾ ಡೈರಿ ಸ್ಥಾಪನೆಗೆ ದೇವೇಗೌಡರೇ ಕಾರಣ. ಎಂದರು.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…