2,250 ಕೋಟಿ ವೆಚ್ಚದ ಮೆಗಾ ಹಾಲಿನ ಡೈರಿ ಉದ್ಘಾಟನೆ – ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಉಪಸ್ಥಿತಿ.
ಮಂಡ್ಯ: ಇಲ್ಲಿನ ಜಿಲ್ಲಾ ಹಾಲು ಒಕ್ಕೂಟದ ಆವರಣದಲ್ಲಿ 2,250 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೆಗಾ ಡೈರಿಯನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ದೀಪ ಬೆಳಗುವ ಮೂಲಕ ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿ ವಹಿಸಿದ್ದರು.
ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಜಿಲ್ಲೆಯ ಡೈರಿಗೆ ಈಗಾಗಲೇ ಹಲವಾರು ಪ್ರಶಂಸೆಗಳು ದೊರೆತಿವೆ. ಈಗ ಮೆಗಾ ಡೈರಿ ಲೋಕಾರ್ಪಣೆಗೊಂಡಿದೆ. ಈ ಡೈರಿ 1 ಲಕ್ಷ ಲೀ. ಹಾಲಿನ ಸಂಗ್ರಹಣೆ ಸಾಮರ್ಥ್ಯ ಹೊಂದಿರುವುದು ಇಲ್ಲಿನ ರೈತರಿಗೆ ಇನ್ನೂ ಅನುಕೂಲವಾಗಲಿದೆ. ಅನಾರೋಗ್ಯದ ನಡುವೆಯೂ ಮಾಜಿ ಪ್ರಧಾನಿ ದೇವೇಗೌಡರು ಮೆಗಾ ಡೈರಿ ಉದ್ಘಾಟನೆಗೆ ಬಂದಿದ್ದಾರೆ. ಬೊಮ್ಮಾಯಿ ಅವರು ಹೆಚ್ಚಿನ ಆಸಕ್ತಿವಹಿಸಿ ಹಾಲು ಉತ್ಪಾದಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.ದೇವೇಗೌಡರ ಕಾಲಿಗೆ ನಮಸ್ಕರಿಸಿದ ಬೊಮ್ಮಾಯಿ : ಮೆಗಾ ಡೈರಿ ಉದ್ಘಾಟನೆ ಸಮಾರಂಭ ಕಾರ್ಯಕ್ರಮಕ್ಕೆ ವೇದಿಕೆಗೆ ಆಗಮಿಸುತ್ತಿದ್ದಂತೆ ದೇವೇಗೌಡರ ಕಾಲಿಗೆ ಬಸವರಾಜ ಬೊಮ್ಮಾಯಿ ನಮಸ್ಕರಿಸಿ ಗೌರವಿಸಿದರು.
ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಕರ್ನಾಟಕ ಹಾಲು ಉತ್ಪಾದನೆಯಲ್ಲಿ ಯಶಸ್ಸು ಕಂಡಿದೆ. ಮನೆಯಲ್ಲಿ ಹಾಲು ಕರೆದು ಹಾಕುವ ಮಹಿಳೆಯರಿಗೆ ಧನ್ಯವಾದಗಳು. ಹಾಲಿಗೆ 5 ರೂ ಪ್ರೊತ್ಸಾಹ ಧನ ಕೊಡ್ತಿದ್ದೇವೆ. ಗೆಜ್ಜಲಗೆರೆಯಲ್ಲಿ 1 ಲಕ್ಷ ಸಾಮರ್ಥ್ಯ ಹೊಂದಿರುವ ಮೆಗಾ ಡೈರಿ ಉದ್ಘಾಟನೆ ಮಾಡಲಾಗಿದೆ. ನರೇಂದ್ರ ಮೋದಿ ಅವರು ಸಹಕಾರ ಮಾಡಿ ದೇಶದಲ್ಲಿ ಶಕ್ತಿ ತುಂಬಿದ್ದಾರೆ. ಬೆಂಗಳೂರಿನ ಮೆಗಾ ಡೈರಿ ಸ್ಥಾಪನೆಗೆ ದೇವೇಗೌಡರೇ ಕಾರಣ. ಎಂದರು.
ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…