ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಜಿ.ಪಂ. ವ್ಯಾಪ್ತಿಯ ಹಳ್ಳಿಕೆರೆ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಶಿವಲಿಂಗಯ್ಯ (೭೨) ಮೃತಪಟ್ಟ ರೈತನಾಗಿದ್ದು, ಇವರಿಗೆ ಪತ್ನಿ ಸಾವಿತ್ರಮ್ಮ, ಪುತ್ರ ವಿಜಯ್ ಹಾಗೂ ಪುತ್ರಿ ರೇಖಾ ಇದ್ದಾರೆ.
ಮೃತ ಶಿವಲಿಂಗಯ್ಯ ಅವರಿಗೆ ೧.೨ ಎಕರೆ ಜಮೀನಿದ್ದು, ಜೋಳ, ಹುರಳಿ ಇನ್ನಿತರೆ ಬೆಳೆಗಳನ್ನು ಬೆಳೆಯುತ್ತಿದ್ದರು. ಜಮೀನಿನಲ್ಲಿ ಬೇಸಾಯ ಮಾಡಲು ಬ್ಯಾಂಕ್ ಆಫ್ ಬರೋಡಾದಲ್ಲಿ ೧ ಲಕ್ಷ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೫೫ ಸಾವಿರ ಹಾಗೂ ೩ ಲಕ್ಷಕ್ಕೂ ಅಧಿಕ ಕೈಸಾಲ ಮಾಡಿರುವುದಾಗಿ ತಿಳಿದುಬಂದಿದೆ.
ಸಾಲಕ್ಕೆ ಹೆದರಿದ ಶಿವಲಿಂಗಯ್ಯ ಡಿ.೧೯ರ ಸೋಮವಾರ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಸಂಬoಧ ಮೃತನ ಪುತ್ರ ವಿಜಯ್ ನೀಡಿದ ದೂರಿನ ಮೇರೆಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…