ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು.
ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಂತರ ಜನತಾ ಪಕ್ಷ ಸೇರ್ಪಡೆಯಾಗಿದ್ದರು. 1998ರಿಂದ 2004ರವರೆಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಜನತಾ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಯಾಗಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾಗಿಯೂ ದುಡಿದಿದ್ದರು.
2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2012ರವರೆಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಇಂಡುವಾಳು ಗ್ರಾಮದ ಜಮೀನಿನಲ್ಲಿ ಬುಧವಾರ ಅವರ ಅಂತ್ಯಕ್ರಿಯೆ ನೆರವೇರಿತು.
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…