ಮಂಡ್ಯ: ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು.
ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್ ಕಾರ್ಖಾನೆ ಅಧ್ಯಕ್ಷರಾಗಿದ್ದರು. ನಂತರ ಜನತಾ ಪಕ್ಷ ಸೇರ್ಪಡೆಯಾಗಿದ್ದರು. 1998ರಿಂದ 2004ರವರೆಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ವಿಧಾನ ಪರಿಷತ್ಗೆ ಆಯ್ಕೆಯಾಗಿದ್ದರು. ಜನತಾ ಶಿಕ್ಷಣ ಸಂಸ್ಥೆ ಕಾರ್ಯದರ್ಶಿಯಾಗಿ ದೀರ್ಘಕಾಲ ಕರ್ತವ್ಯ ನಿರ್ವಹಿಸಿದ್ದರು. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾಗಿಯೂ ದುಡಿದಿದ್ದರು.
2008ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2012ರವರೆಗೂ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಇಂಡುವಾಳು ಗ್ರಾಮದ ಜಮೀನಿನಲ್ಲಿ ಬುಧವಾರ ಅವರ ಅಂತ್ಯಕ್ರಿಯೆ ನೆರವೇರಿತು.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…