ಜಿಲ್ಲೆಗಳು

ಮಂಡ್ಯ : ಅನಾರೋಗ್ಯದಿಂದ ನಟ ರವಿ ಪ್ರಸಾದ್ ನಿಧನ

ಮಂಡ್ಯ : ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ. ರವಿಪ್ರಸಾದ್ (43) ಬುಧವಾರ ಸಂಜೆ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು  ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಾಹಿತಿ ಡಾ. ಎಚ್.ಎಸ್. ಮುದ್ದೇಗೌಡರ ಪುತ್ರರಾದ ರವಿಪ್ರಸಾದ್, ತಂದೆ-ತಾಯಿ, ಇಬ್ಬರು ತಂಗಿಯರು, ಪತ್ನಿ, ಮಗ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮಂಡ್ಯದ ಗೆಳೆಯರ ಬಳಗ ಹಾಗೂ ಜನಧನಿ ರಂಗಭೂಮಿ ತಂಡದ ಮೂಲಕ ಕಲೆಯ ಗೀಳು ಅಂಟಿಸಿಕೊಂಡ ರವಿಪ್ರಸಾದ್, ಧಾರವಾಹಿ ಮತ್ತು ಸಿನಿಮಾಗಳಲ್ಲಿ ನಟಿಸುತ್ತಲೇ ಮಂಡ್ಯ ರವಿ ಆಗಿ ಪ್ರಸಿದ್ಧ ಪಡೆದಿದ್ದರು.
ಬಾಲ್ಯದಲ್ಲೇ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ರವಿ, ನಂತರ ಬಣ್ಣದ ಲೋಕದತ್ತ ಒಲವು ಬೆಳೆಸಿಕೊಂಡರು. ಎಂ.ಎ. (ಇಂಗ್ಲೀಷ್) ಮತ್ತು ಎಲ್.ಎಲ್.ಬಿ. ಮಾಡಿದ್ದರೂ ಆಯ್ಕೆ ಮಾಡಿಕೊಂಡಿದ್ದ ವೃತ್ತಿ ಮಾತ್ರ ನಟನೆ. 1996ರಲ್ಲಿ ಜನದನಿ ಹವ್ಯಾಸಿ ನಾಟಕ ತಂಡ ಸೇರಿ ಅಲ್ಲಿಂದ ಟಿ.ಎಸ್. ನಾಗಾಭರಣ ನಿರ್ದೇಶನದ ಮಹಾಮಾಯಿ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಜಗತ್ತಿಗೆ ಕಾಲಿಟ್ಟರು. ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದರು. ಮೊದಲು ಬ್ರೇಕ್ ನೀಡಿದ್ದ ಧಾರವಾಹಿ ಮಿಂಚು, ನಂತರ ಮುಕ್ತ ಮುಕ್ತ, ಚಿತ್ರಲೇಖ, ಯಶೋಧೆ, ವರಲಕ್ಷ್ಮಿ ಸ್ಪೋರ್ಟ್ಸ್ ಸೇರಿದಂತೆ ಸಾಕಷ್ಟು ಧಾರವಾಹಿಗಳಲ್ಲಿ ನಟಿಸಿದ್ದಾರೆ.
ಕೆಲವರ್ಷಗಳ ಹಿಂದೆ ಪ್ರಸಾರವಾದ ಮಗಳು ಜಾನಕಿ ಧಾರವಾಹಿಯ ಚಂದು ಭಾರ್ಗಿ ಪಾತ್ರದ ಮೂಲಕ ರವಿ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು. ಅಲ್ಲದೆ, ಕಾಫಿ ತೋಟ ಸೇರಿದಂತೆ ಹಲವು ಸಿನಿಮಾಗಳಲ್ಲೂ ಇವರು ನಟಿಸಿದ್ದಾರೆ.
ಗುರುವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ :
ಮೃತ ಎಂ. ರವಿಪ್ರಸಾದ್ ಅವರ ಅಂತ್ಯಕ್ರಿಯೆ ನಗರದ ಕಲ್ಲಹಳ್ಳಿಯಲ್ಲಿರುವ ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಮೃತರ ತಂದೆ ಡಾ. ಎಚ್.ಎಸ್. ಮುದ್ದೇಗೌಡ ತಿಳಿಸಿದ್ದಾರೆ.

andolanait

Recent Posts

ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಹೂಡಿದ್ದ ಮಾನಹಾನಿ ಪ್ರಕರಣ ವಜಾ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರದ ಜಾಹೀರಾತು ನೀಡಿದ ಪ್ರಕರಣದಲ್ಲಿ ಲೋಕಸಭೆಯ ಪ್ರತಿಪಕ್ಷದ ನಾಯಕ…

19 mins ago

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

1 hour ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

2 hours ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

2 hours ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

2 hours ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

2 hours ago