ಜಿಲ್ಲೆಗಳು

ಮಂಡ್ಯ: ಮಾಜಿ ವಿಧಾನಪರಿಷತ್ ಸದಸ್ಯ ಇಂಡವಾಳು ಹೆಚ್ ಹೊನ್ನಪ್ಪ ವಿಧಿವಶ

ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ಇಂಡವಾಳು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂಡವಾಳು ಹೊನ್ನಯ್ಯನವರ ಪುತ್ರ ಹೊನ್ನಪ್ಪ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿತ್ವ ಹೊಂದಿ ಜನಪ್ರಿಯ ನಾಯಕರಾಗಿದ್ದರು. ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೂಡ ಆಗಿ ಸೇವೆ ಸಲ್ಲಿಸಿದ್ದರು. ಎಸ್.ಡಿ ಜಯರಾಂ, ಎಂ ಎಸ್ ಆತ್ಮಾನಂದ ಮದ್ದೂರಿನ ಎಂ ಎಸ್ ಸಿದ್ದರಾಜು ಸೇರಿದಂತೆ ಅಪಾರ ಒಡನಾಡಿಗಳನ್ನು ಹೊಂದಿದ್ದ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ.ಮಂಡ್ಯ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ ಇವರು ಮೈಷುಗರ್ ಅಧ್ಯಕ್ಷರೂ ಅಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಬೆಳಗ್ಗೆ ಮನೆಯಲ್ಲಿ ವಿಧಿವಶರಾಗಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಇಂದು ಸಂಜೆ 4 ಗಂಟೆಗೆ ಇಂಡವಾಳು ಗ್ರಾಮದಲ್ಲಿ ನೆರವೇರಲಿದೆ. ಹೆಚ್.ಹೊನ್ನಪ್ಪ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

andolanait

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

7 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

7 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

7 hours ago