ಜಿಲ್ಲೆಗಳು

ಜಾನಪದ ಪ್ರಕಾರಗಳ ಕಣ್ತುಂಬಿಕೊಂಡ ಜನರು

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.


ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನಡೆದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದಲ್ಲಿ ನಗರದ ವಿವಿಧ ಬೀದಿಗಳಲ್ಲಿ ನಡೆದ ಜನಪದರ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರದರ್ಶನ ,ಮಾಡುತ್ತಾ ಬೆಂಗಳೂರು-ಮೈಸೂರು ಹೆದ್ದಾರಿ, ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತ, ನೂರಡಿ ರಸ್ತೆಯ ಮೂಲಕ ವೇದಿಕೆಗೆ ಆಗಮಿಸಿದರು.

ಜನಪದ ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್‌ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು, ವೀರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರು ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಮುದ ನೀಡಿದವು.
ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಅನುರಣಿಸಿದವು. ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೇ ಸೃಷ್ಟಿಸಿದವು.

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

7 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

7 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

10 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

11 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

11 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

11 hours ago