ಜಿಲ್ಲೆಗಳು

ಜಾನಪದ ಪ್ರಕಾರಗಳ ಕಣ್ತುಂಬಿಕೊಂಡ ಜನರು

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.


ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನಡೆದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದಲ್ಲಿ ನಗರದ ವಿವಿಧ ಬೀದಿಗಳಲ್ಲಿ ನಡೆದ ಜನಪದರ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರದರ್ಶನ ,ಮಾಡುತ್ತಾ ಬೆಂಗಳೂರು-ಮೈಸೂರು ಹೆದ್ದಾರಿ, ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತ, ನೂರಡಿ ರಸ್ತೆಯ ಮೂಲಕ ವೇದಿಕೆಗೆ ಆಗಮಿಸಿದರು.

ಜನಪದ ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್‌ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು, ವೀರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರು ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಮುದ ನೀಡಿದವು.
ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಅನುರಣಿಸಿದವು. ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೇ ಸೃಷ್ಟಿಸಿದವು.

andolanait

Recent Posts

ಮೈಸೂರು | ವಿವಿಧೆಡೆ ವಿಷ್ಣುವರ್ಧನ್‌ ಅವರ ಪುಣ್ಯ ಸ್ಮರಣೆ

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್…

1 hour ago

ಉತ್ತರಾಖಂಡದ ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್:‌ 7 ಮಂದಿ ಪ್ರಯಾಣಿಕರು ಸಾವು

ಉತ್ತರಾಖಂಡ: ಇಲ್ಲಿನ ಅಲ್ಮೋರಾದ ಭಿಕಿಯಾಸೈನ್‌ ಪ್ರದೇಶದಲ್ಲಿ ಪ್ರಯಾಣಿಕರಿದ್ದ ಬಸ್‌ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 12 ಮಂದಿ…

2 hours ago

ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್‌ ವಾದ್ರಾ ನಿಶ್ಚಿತಾರ್ಥ

ನವದೆಹಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಉದ್ಯಮಿ ರಾಬರ್ಟ್‌ ವಾದ್ರಾ ಪುತ್ರ ರೈಹಾನ್‌ ವಾದ್ರಾ ತಮ್ಮ ಬಹುಕಾಲದ ಗೆಳತಿ…

2 hours ago

ಬಂಗಾಳದಲ್ಲಿ ಬಿಜೆಪಿಗೆ ಒಂದು ಅವಕಾಶ ಕೊಡಿ: ಅಮಿತ್‌ ಶಾ ಮನವಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಬಿಜೆಪಿಗೆ ಒಂದು ಅವಕಾಶ ಕೊಡಿ. ಭಯ, ಭ್ರಷ್ಟಾಚಾರ ಹಾಗೂ ದುರಾಡಳಿತವನ್ನು ಉತ್ತಮ ಆಡಳಿತದೊಂದಿಗೆ…

3 hours ago

ಕರ್ನಾಟಕದಲ್ಲೂ ಎಸ್‌ಐಆರ್‌ ಜಾರಿ ಆಗಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ದೇಶದಾದ್ಯಂತ ಕೇಂದ್ರ ಚುನಾವಣಾ ಆಯೋಗ ಕೈಗೆತ್ತಿಕೊಂಡಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್‌ಐಆರ್)ಯನ್ನು ಕರ್ನಾಟಕದಲ್ಲೂ ನಡೆಸಬೇಕೆಂದು ಕೇಂದ್ರ ಸಚಿವೆ ಶೋಭಾ…

3 hours ago

ಹುಣಸೂರು: ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಾಹಿತಿ ಪ್ರಕಾರ…

4 hours ago