ಜಿಲ್ಲೆಗಳು

ಜಾನಪದ ಪ್ರಕಾರಗಳ ಕಣ್ತುಂಬಿಕೊಂಡ ಜನರು

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.


ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನಡೆದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದಲ್ಲಿ ನಗರದ ವಿವಿಧ ಬೀದಿಗಳಲ್ಲಿ ನಡೆದ ಜನಪದರ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರದರ್ಶನ ,ಮಾಡುತ್ತಾ ಬೆಂಗಳೂರು-ಮೈಸೂರು ಹೆದ್ದಾರಿ, ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತ, ನೂರಡಿ ರಸ್ತೆಯ ಮೂಲಕ ವೇದಿಕೆಗೆ ಆಗಮಿಸಿದರು.

ಜನಪದ ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್‌ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು, ವೀರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರು ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಮುದ ನೀಡಿದವು.
ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಅನುರಣಿಸಿದವು. ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೇ ಸೃಷ್ಟಿಸಿದವು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

51 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago