ಜಿಲ್ಲೆಗಳು

ಜಾನಪದ ಪ್ರಕಾರಗಳ ಕಣ್ತುಂಬಿಕೊಂಡ ಜನರು

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.


ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನಡೆದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದಲ್ಲಿ ನಗರದ ವಿವಿಧ ಬೀದಿಗಳಲ್ಲಿ ನಡೆದ ಜನಪದರ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರದರ್ಶನ ,ಮಾಡುತ್ತಾ ಬೆಂಗಳೂರು-ಮೈಸೂರು ಹೆದ್ದಾರಿ, ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತ, ನೂರಡಿ ರಸ್ತೆಯ ಮೂಲಕ ವೇದಿಕೆಗೆ ಆಗಮಿಸಿದರು.

ಜನಪದ ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್‌ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು, ವೀರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರು ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಮುದ ನೀಡಿದವು.
ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಅನುರಣಿಸಿದವು. ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೇ ಸೃಷ್ಟಿಸಿದವು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago