ಜಿಲ್ಲೆಗಳು

ಜಾನಪದ ಪ್ರಕಾರಗಳ ಕಣ್ತುಂಬಿಕೊಂಡ ಜನರು

ಮಂಡ್ಯ: ಆಧುನಿಕತೆ ಭರದಲ್ಲಿ ನಶಿಸುತ್ತಿರುವ ಜಾನಪದ ಜಗತ್ತಿನ ಎಲ್ಲ ಪ್ರಕಾರಗಳನ್ನು ನಗರದ ನಾಗರಿಕರು ಕಣ್ತುಂಬಿಕೊಂಡರು. ವಿಶಿಷ್ಟ ಕಲೆಗಳ ಪ್ರದರ್ಶನಕ್ಕೆ ಮನಸೋತು ನಿಬ್ಬೆರಗಾದರು. ಜಾನಪದ ಕಲಾತಂಡಗಳ ಮೆರವಣಿಗೆ ಅಕ್ಷರಶಃ ಜನಪದ ಜಾತ್ರೆಯನ್ನಾಗಿಸಿತ್ತು.


ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಹಾಗೂ ಜಿಲ್ಲಾ ಘಟಕದ ವತಿಯಿಂದ ನಡೆದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದಲ್ಲಿ ನಗರದ ವಿವಿಧ ಬೀದಿಗಳಲ್ಲಿ ನಡೆದ ಜನಪದರ ನೃತ್ಯ ಪ್ರದರ್ಶನ ಆಕರ್ಷಕವಾಗಿತ್ತು. ಜನಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.  ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕಲಾವಿದರ ತಂಡಗಳು, ಜಿಲ್ಲಾಧಿಕಾರಿಗಳ ಕಚೇರಿಯಿಂದ ಪ್ರದರ್ಶನ ,ಮಾಡುತ್ತಾ ಬೆಂಗಳೂರು-ಮೈಸೂರು ಹೆದ್ದಾರಿ, ಮಹಾವೀರ ವೃತ್ತದಿಂದ ಹೊಸಹಳ್ಳಿ ವೃತ್ತ, ನೂರಡಿ ರಸ್ತೆಯ ಮೂಲಕ ವೇದಿಕೆಗೆ ಆಗಮಿಸಿದರು.

ಜನಪದ ಜಾತ್ರೆಯಲ್ಲಿ ದೇಶಿ ಜಾನಪದ ಕಲೆಗಳು ಸುಂದರವಾಗಿ ಅನಾವರಣಗೊಳ್ಳುವುದರ ಮೂಲಕ ನಗರದ ಜನರಿಗೆ ವಿಶಿಷ್ಟ ಅನುಭವ ನೀಡಿದವು. ಮಂಡ್ಯದ ಪ್ರಮುಖ ಆಕರ್ಷಣೆಯಾದ ಪೂಜಾ ಕುಣಿತ, ಡೊಳ್ಳು ಕುಣಿತ ಗಮನ ಸೆಳೆಯಿತು. ಉಳಿದಂತೆ ಗೊರವರ ಕುಣಿತ, ಗೊರುಕಾನ ನೃತ್ಯ, ಚಿಟ್‌ಮೇಳ, ಕೋಲಾಟ, ಜಗ್ಗಲಿಗೆ ಮೇಳ, ಎಂ.ನಗಾರಿ, ಸುಗ್ಗಿ ಕುಣಿತ, ಹಗಲುವೇಷ, ಕೊರಣಿಗೆ ಭಾವನೃತ್ಯ, ಪುರುವಂತಿಕೆ ಮೇಳ, ಗೊಂದಲಿಗರ ಮೇಳ, ಹೆಜ್ಜೆಮೇಳ, ಕಂಸಾಳೆ, ಪೂಜಾಕುಣಿತ, ವೀರಭದ್ರನ ಕುಣಿತ, ಸೂತ್ರದ ಗೊಂಬೆ, ಗಾರುಡಿಗೊಂಬೆ ಗಮನ ಸೆಳೆದವು, ವೀರಗಾಸೆ ಮೂಲಕ ಪುರವಂತರ ರೋಷಾವೇಶ, ಲಂಬಾನಿ ಮಹಿಳೆಯರು ವಿಶಿಷ್ಟ ಹಾಡು ಕುಣಿತ, ಕೋಲಾಟ ಹಾಗೂ ಸೋಮನ ಕುಣಿತಗಳು ಮುದ ನೀಡಿದವು.
ಕಹಳೆ, ಕಂಸಾಳೆ, ಜಗ್ಗಲಿಗೆ, ಡೊಳ್ಳು, ನಗಾರಿ, ತಮಟೆ, ಡೋಲು, ಕರಡಿ ಮಜಲು, ಚೌಡಿಕೆಗಳ ನಾದ ಅನುರಣಿಸಿದವು. ಗೀಗೀ ನೀಲಗಾರರ ಪದಗಳು ಮತ್ತು ಸೋಬಾನೆ ಪದಗಳು ಹೊಸ ಲೋಕವನ್ನೇ ಸೃಷ್ಟಿಸಿದವು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago