ಜಿಲ್ಲೆಗಳು

ಚಿರತೆ ಸೆರೆ ಹಿಡಿಯಲು ವನ್ಯಜೀವಿ ಸಂರಕ್ಷಣಾ ದಳಕ್ಕೆ ಮೊರೆ

 ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ

ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದ್ದು, ಈ ಕಾರಣದಿಂದ ವನ್ಯಜೀವಿ ಸಂರಕ್ಷಣಾ ದಳದಿಂದ ಕಾರ್ಯಾಚರಣೆ ಮಾಡಿಸುವುದು ಸೂಕ್ತ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಎಚ್.ಎಸ್. ಆನಂದ ಅವರ ಅಧ್ಯಕ್ಷತೆಯಲ್ಲಿ ನಗರದ ಕಾ.ನೀ.ನಿ.ದ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ನ.೭ರಿಂದ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಪ್ರವಾಸಿಗರಿಗೆ ಅನುವು ಮಾಡಿಕೊಡುವ ದೃಷ್ಟಿಯಿಂದ ಅರಣ್ಯ ಇಲಾಖೆ ಮತ್ತು ನಿಗದ ಕಚೇರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಚಿರತೆಯ ಚಲನವಲನಗಳನ್ನು ವೀಕ್ಷಿಸುವ ಸಲುವಾಗಿ ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ಕ್ಯಾಮೆರಾ ಟ್ರಾö್ಯಪ್‌ಗಳನ್ನು ಅಳವಡಿಸಲಾಗಿದೆ. ಇನ್ನೂ ಅನೇಕ ಭಾಗಗಳಲ್ಲಿ ಕಂಡುಬಂದಿರುವುದರಿಂದ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಮೆರಾ ಟ್ರ್ಯಾಪ್‌ ಅಳವಡಿಸಿದಲ್ಲಿ ಚಿರತೆಯನ್ನು ಸೆರೆ ಹಿಡಿಯಲು ಅನುಕೂಲವಾಗುತ್ತದೆ ಎಂದು ತೀರ್ಮಾನಿಸಲಾಯಿತು.
ಚಿರತೆಯು ಕೆಲವೊಮ್ಮೆ ಉತ್ತು ಮತ್ತು ದಕ್ಷಿಣ ಗಾರ್ಡನ್ ಹಾಗೂ ತೋಟಗಾರಿಕೆ ಇಲಾಖೆಯ ನಗುವನದಲ್ಲಿ ಸಂಚರಿಸುತ್ತಿರುವುದು ಕಂಡುಬAದ ಕಾರಣ ಡ್ರೋನ್ ಕ್ಯಾಮೆರಾ ಕಾರ್ಯಾಚರಣೆ ಮಾಡಿ ಪತ್ತೆ ಹಚ್ಚಿ ಸೆರೆ ಹಿಡಿಬಹುದಾಗಿರುತ್ತದೆ ಎಂದು ನಿರ್ಣಯಿಸಲಾಯಿತು.
ಬೃಂದಾವನದಲ್ಲಿ ಅನವಶ್ಯಕ ಗಿಡಗಂಟಿಗಳನ್ನು ತೆರವುಗೊಳಿಸುತ್ತಿರುವ ಕಾರ್ಮಿಕರು ಸುರಕ್ಷತೆ ಹಾಗೂ ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು. ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯ ಮೇಲಧಿಕಾಗಿಳ ಗಮನಕ್ಕೆ ತಂದು ಚರ್ಚಿಸಿ ಗುರುವಾರದಿಂದಲೇ ತೀವ್ರ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕೆ.ಆರ್.ಎಸ್. ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಫಾರೂಖ್ ಅಹಮದ್ ಅಬು, ನಾಗಮಂಗಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಮಂಡ್ಯ ಉಪವಿಭಾಗದ ಮಹದೇವಸ್ವಾಮಿ, ಶ್ರೀರಂಗಪಟ್ಟಣದ ಅರಣ್ಯಾಧಿಕಾರಿ ಅನಿತಾ ಭಾಗವಹಿಸಿದ್ದರು.

 

andolanait

Recent Posts

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

23 mins ago

ಶಿಥಿಲಾವಸ್ಥೆಯಲ್ಲಿ ‘ದಲಿತ- ಗಾಂಧಿ’ ಶತಮಾನದ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಮಕ್ಕಳಲ್ಲಿ ಗಾಂಧೀಜಿ ಅವರ ಸರಳತೆ, ಸಹಿಷ್ಣುತೆ, ಸಮಾನತೆಯ ಚಿಂತನೆಗಳ ಅರಿವು…

27 mins ago

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ: ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಯುವ ಮುಖಂಡ ನಿಶಾಂತ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…

10 hours ago

ಹನೂರು| ಗೋಪಿನಾಥಂ ಸಫಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ಕೊಟ್ಟ ಹುಲಿರಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…

13 hours ago

ಇರಾನ್ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಇಸ್ರೇಲ್

ಟೆಹರಾನ್‌: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…

14 hours ago

ಅಮೆರಿಕಾದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…

14 hours ago