ಜಿಲ್ಲೆಗಳು

ಚಿರತೆ ಸೆರೆ ಹಿಡಿಯಲು ವನ್ಯಜೀವಿ ಸಂರಕ್ಷಣಾ ದಳಕ್ಕೆ ಮೊರೆ

 ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ

ಮಂಡ್ಯ: ಪ್ರಸಿದ್ಧ ಪ್ರವಾಸಿತಾಣ ಕೆ.ಆರ್.ಎಸ್.ನ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಾಗಿನಿAದ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದರಿಂದ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದ್ದು, ಈ ಕಾರಣದಿಂದ ವನ್ಯಜೀವಿ ಸಂರಕ್ಷಣಾ ದಳದಿಂದ ಕಾರ್ಯಾಚರಣೆ ಮಾಡಿಸುವುದು ಸೂಕ್ತ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಎಚ್.ಎಸ್. ಆನಂದ ಅವರ ಅಧ್ಯಕ್ಷತೆಯಲ್ಲಿ ನಗರದ ಕಾ.ನೀ.ನಿ.ದ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಳೆದ ನ.೭ರಿಂದ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಪ್ರವಾಸಿಗರಿಗೆ ಅನುವು ಮಾಡಿಕೊಡುವ ದೃಷ್ಟಿಯಿಂದ ಅರಣ್ಯ ಇಲಾಖೆ ಮತ್ತು ನಿಗದ ಕಚೇರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಚಿರತೆಯ ಚಲನವಲನಗಳನ್ನು ವೀಕ್ಷಿಸುವ ಸಲುವಾಗಿ ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ಕ್ಯಾಮೆರಾ ಟ್ರಾö್ಯಪ್‌ಗಳನ್ನು ಅಳವಡಿಸಲಾಗಿದೆ. ಇನ್ನೂ ಅನೇಕ ಭಾಗಗಳಲ್ಲಿ ಕಂಡುಬಂದಿರುವುದರಿಂದ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಯಾಮೆರಾ ಟ್ರ್ಯಾಪ್‌ ಅಳವಡಿಸಿದಲ್ಲಿ ಚಿರತೆಯನ್ನು ಸೆರೆ ಹಿಡಿಯಲು ಅನುಕೂಲವಾಗುತ್ತದೆ ಎಂದು ತೀರ್ಮಾನಿಸಲಾಯಿತು.
ಚಿರತೆಯು ಕೆಲವೊಮ್ಮೆ ಉತ್ತು ಮತ್ತು ದಕ್ಷಿಣ ಗಾರ್ಡನ್ ಹಾಗೂ ತೋಟಗಾರಿಕೆ ಇಲಾಖೆಯ ನಗುವನದಲ್ಲಿ ಸಂಚರಿಸುತ್ತಿರುವುದು ಕಂಡುಬAದ ಕಾರಣ ಡ್ರೋನ್ ಕ್ಯಾಮೆರಾ ಕಾರ್ಯಾಚರಣೆ ಮಾಡಿ ಪತ್ತೆ ಹಚ್ಚಿ ಸೆರೆ ಹಿಡಿಬಹುದಾಗಿರುತ್ತದೆ ಎಂದು ನಿರ್ಣಯಿಸಲಾಯಿತು.
ಬೃಂದಾವನದಲ್ಲಿ ಅನವಶ್ಯಕ ಗಿಡಗಂಟಿಗಳನ್ನು ತೆರವುಗೊಳಿಸುತ್ತಿರುವ ಕಾರ್ಮಿಕರು ಸುರಕ್ಷತೆ ಹಾಗೂ ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು. ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯ ಮೇಲಧಿಕಾಗಿಳ ಗಮನಕ್ಕೆ ತಂದು ಚರ್ಚಿಸಿ ಗುರುವಾರದಿಂದಲೇ ತೀವ್ರ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಕೆ.ಆರ್.ಎಸ್. ಕಾರ್ಯಪಾಲಕ ಇಂಜಿನಿಯರ್ ರಾಮಮೂರ್ತಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಫಾರೂಖ್ ಅಹಮದ್ ಅಬು, ನಾಗಮಂಗಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಮಂಡ್ಯ ಉಪವಿಭಾಗದ ಮಹದೇವಸ್ವಾಮಿ, ಶ್ರೀರಂಗಪಟ್ಟಣದ ಅರಣ್ಯಾಧಿಕಾರಿ ಅನಿತಾ ಭಾಗವಹಿಸಿದ್ದರು.

 

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

12 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

12 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

12 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

12 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

12 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

12 hours ago