ಜಿಲ್ಲೆಗಳು

ಮಂಡ್ಯದಲ್ಲಿ ಬೋನಿಗೆ ಬಿತ್ತು ಮತ್ತೊಂದು ಚಿರತೆ

ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ

ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ ನಡುವೆ ಶ್ರೀರಂಗಪಟ್ಟಣದ ಕೆ ಆರ್‌ ಎಸ್‌ ಬಳಿ ಕಾಣಿಸಿಕೊಂಡ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

ನಾಗಮಂಗಲದ ಮುತ್ಸಂದ್ರ, ಗೊಲ್ಲರಹಳ್ಳಿ, ಕಸಲಗೆರೆ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ಸಂಚರಿಸಿ ಕುರಿ, ಮೇಕೆಗಳನ್ನು ಹಿಡಿದು ಹೊತ್ತೋಯ್ಯುತ್ತಿದ್ದ ಚಿರತೆಯಿಂದಾಗಿ ಇಲ್ಲಿನ ಗ್ರಾಮಸ್ಥರು ರೋಸಿಹೋಗಿದ್ದರು.
ರೈತರ ದೂರಿನ ಮೇರೆಗೆ ಅರಣ್ಯ ಇಲಾಖೆಯವರು 4ನೇ ತಾರೀಖಿನಂದು ಚಿರತೆ ಸೆರೆಗಾಗಿ ಬೋನಿಟ್ಟು ಕಾಯುತ್ತಿದ್ದರು.
ಸೋಮವಾರ ಮಧ್ಯಾಹ್ನ 12ಗಂಟೆ ಸಮಯದಲ್ಲಿ ಮುತ್ಸಂದ್ರ ಗ್ರಾಮದ ಬಳಿ ಚಿರತೆ ಬೋನಿಗೆ ಬಿದ್ದು ಸೆರೆಯಾಗಿದೆ.
ಚಿರತೆ ಸೆರೆಯಾಗಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸತೀಶ್, ಉಪವಲಯ ಅರಣ್ಯಾಧಿಕಾರಿ ಮಂಜು, ಅರಣ್ಯ ರಕ್ಷಕರಾದ ರಂಗಸ್ವಾಮಿ, ಸಾಕಯ್ಯ, ಕ್ಷೇಮಾಭಿವೃದ್ದಿ ನೌಕರ ಪುಟ್ಟಸ್ವಾಮಿ ಭಾಗವಹಿಸಿದ್ದರು.

andolanait

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

8 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

8 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

9 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

9 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

12 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

12 hours ago