ಜಿಲ್ಲೆಗಳು

ಮಂಡ್ಯದಲ್ಲಿ ಬೋನಿಗೆ ಬಿತ್ತು ಮತ್ತೊಂದು ಚಿರತೆ

ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ

ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ ನಡುವೆ ಶ್ರೀರಂಗಪಟ್ಟಣದ ಕೆ ಆರ್‌ ಎಸ್‌ ಬಳಿ ಕಾಣಿಸಿಕೊಂಡ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

ನಾಗಮಂಗಲದ ಮುತ್ಸಂದ್ರ, ಗೊಲ್ಲರಹಳ್ಳಿ, ಕಸಲಗೆರೆ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ಸಂಚರಿಸಿ ಕುರಿ, ಮೇಕೆಗಳನ್ನು ಹಿಡಿದು ಹೊತ್ತೋಯ್ಯುತ್ತಿದ್ದ ಚಿರತೆಯಿಂದಾಗಿ ಇಲ್ಲಿನ ಗ್ರಾಮಸ್ಥರು ರೋಸಿಹೋಗಿದ್ದರು.
ರೈತರ ದೂರಿನ ಮೇರೆಗೆ ಅರಣ್ಯ ಇಲಾಖೆಯವರು 4ನೇ ತಾರೀಖಿನಂದು ಚಿರತೆ ಸೆರೆಗಾಗಿ ಬೋನಿಟ್ಟು ಕಾಯುತ್ತಿದ್ದರು.
ಸೋಮವಾರ ಮಧ್ಯಾಹ್ನ 12ಗಂಟೆ ಸಮಯದಲ್ಲಿ ಮುತ್ಸಂದ್ರ ಗ್ರಾಮದ ಬಳಿ ಚಿರತೆ ಬೋನಿಗೆ ಬಿದ್ದು ಸೆರೆಯಾಗಿದೆ.
ಚಿರತೆ ಸೆರೆಯಾಗಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸತೀಶ್, ಉಪವಲಯ ಅರಣ್ಯಾಧಿಕಾರಿ ಮಂಜು, ಅರಣ್ಯ ರಕ್ಷಕರಾದ ರಂಗಸ್ವಾಮಿ, ಸಾಕಯ್ಯ, ಕ್ಷೇಮಾಭಿವೃದ್ದಿ ನೌಕರ ಪುಟ್ಟಸ್ವಾಮಿ ಭಾಗವಹಿಸಿದ್ದರು.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

8 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

9 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

9 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

10 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

10 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

10 hours ago