ಜಿಲ್ಲೆಗಳು

ಮಂಡ್ಯದಲ್ಲಿ ಬೋನಿಗೆ ಬಿತ್ತು ಮತ್ತೊಂದು ಚಿರತೆ

ನಿನ್ನೆ ಮದ್ದೂರು, ಇಂದು ನಾಗಮಂಗಲ, ಇನ್ನೂ ನಿಂತಿಲ್ಲ ಚಿರತೆ ಕಾರ್ಯಾಚರಣೆ

ನಾಗಮಂಗಲ: ಮದ್ದೂರು ತಾಲ್ಲೂಕಿನ ಕುಂದನಕುಪ್ಪೆ ಬಳಿ ಚಿರತೆ ಸೆರೆಯಾದ ಬೆನ್ನಿಗೇ ನಾಗಮಂಗಲದ ದೇವಲಾಪುರ ಹೋಬಳಿ ಮುತ್ಸಂದ್ರ ಗ್ರಾಮದ ಬಳಿ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಸೆರೆ ಹಿಡಿದಿದ್ದಾರೆ. ಈ ನಡುವೆ ಶ್ರೀರಂಗಪಟ್ಟಣದ ಕೆ ಆರ್‌ ಎಸ್‌ ಬಳಿ ಕಾಣಿಸಿಕೊಂಡ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರಿದಿದೆ.

ನಾಗಮಂಗಲದ ಮುತ್ಸಂದ್ರ, ಗೊಲ್ಲರಹಳ್ಳಿ, ಕಸಲಗೆರೆ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ಸಂಚರಿಸಿ ಕುರಿ, ಮೇಕೆಗಳನ್ನು ಹಿಡಿದು ಹೊತ್ತೋಯ್ಯುತ್ತಿದ್ದ ಚಿರತೆಯಿಂದಾಗಿ ಇಲ್ಲಿನ ಗ್ರಾಮಸ್ಥರು ರೋಸಿಹೋಗಿದ್ದರು.
ರೈತರ ದೂರಿನ ಮೇರೆಗೆ ಅರಣ್ಯ ಇಲಾಖೆಯವರು 4ನೇ ತಾರೀಖಿನಂದು ಚಿರತೆ ಸೆರೆಗಾಗಿ ಬೋನಿಟ್ಟು ಕಾಯುತ್ತಿದ್ದರು.
ಸೋಮವಾರ ಮಧ್ಯಾಹ್ನ 12ಗಂಟೆ ಸಮಯದಲ್ಲಿ ಮುತ್ಸಂದ್ರ ಗ್ರಾಮದ ಬಳಿ ಚಿರತೆ ಬೋನಿಗೆ ಬಿದ್ದು ಸೆರೆಯಾಗಿದೆ.
ಚಿರತೆ ಸೆರೆಯಾಗಿದ್ದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಾಗರಹೊಳೆ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸತೀಶ್, ಉಪವಲಯ ಅರಣ್ಯಾಧಿಕಾರಿ ಮಂಜು, ಅರಣ್ಯ ರಕ್ಷಕರಾದ ರಂಗಸ್ವಾಮಿ, ಸಾಕಯ್ಯ, ಕ್ಷೇಮಾಭಿವೃದ್ದಿ ನೌಕರ ಪುಟ್ಟಸ್ವಾಮಿ ಭಾಗವಹಿಸಿದ್ದರು.

andolanait

Recent Posts

ಮುಡಾ ಕೇಸನ್ನು ಸಿಬಿಐ ತನಿಖೆಗೆ ಕೊಡಬೇಕು: ಶಾಸಕ ಶ್ರೀವತ್ಸ ಆಗ್ರಹ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ದಾಖಲೆ ಪರಿಶೀಲನೆಯ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಈ ಕೇಸನ್ನು ಸಿಬಿಐ ತನಿಖೆಗೆ…

42 mins ago

ಮುಡಾ ಪ್ರಕರಣ ಸಿವಿಲ್ ಮ್ಯಾಟ್ರೂ ಎಂದ ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮೈಸೂರು ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹೀಗಾಗಿ ಈ ವಿಚಾರ…

1 hour ago

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ…

2 hours ago

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.…

2 hours ago

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

2 hours ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

2 hours ago