ಜಿಲ್ಲೆಗಳು

ಮಂಡ್ಯ : ಮಳವಳ್ಳಿ ನಾಗರತ್ನಗೆ ಧಾರವಾಡ ಕರ್ನಾಟಕ ವಿವಿ ಪಿ.ಹೆಚ್‌ಡಿ ಪದವಿ

ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ.
ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ “ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ” ವಿಷಯದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ‌ನೀಡಿ ಪುರಸ್ಕರಿಸಲಾಗಿದೆ.
ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಮುಖ್ಯಸ್ಥ ಫ್ರೊ. ಲೋಕೇಶ್ ಅವರ ಮಾರ್ಗದರ್ಶನದಲ್ಲಿ ನಾಗರತ್ನ ಅವರು ಮಹಾ ಪ್ರಬಂಧ ಸಿದ್ಧಪಡಿಸಿದ್ದರು.

ಎಂ. ನಾಗರತ್ನ ಅವರ ಕಿರುಪರಿಚಯ : 
ಪ್ರಸ್ತುತ ಉಡುಪಿಯ ಅಜ್ಜರಕಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಗೃಹಿಣಿ, ಮಳವಳ್ಳಿಯ ನಾಗರತ್ನ ಅವರು ಇತಿಹಾಸ ಮತ್ತು ಕನ್ನಡ ಈ ಎರಡು ವಿಷಯಗಳಲ್ಲಿ ಕ್ರಮವಾಗಿ ಬೆಂಗಳೂರು ವಿವಿ ಮತ್ತು ಮೈಸೂರಿನ ಕರಾಮು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಂ.ಎಡ್ ಪದವಿ ಅಧ್ಯಯನ ಮಾಡಿರುವ ಇವರು ಎರಡು ವರ್ಷ ಪ್ರೌಢಶಾಲಾ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಶಾಲಾ ವಿದ್ಯಾರ್ಥಿನಿಯಾಗಿದ್ದ ದಿನಗಳಿಂದಲೂ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಗಮನ ಸೆಳೆದಿದ್ದ ಇವರು NCC ‘ಬಿ’ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago