ಜಿಲ್ಲೆಗಳು

ಮಂಡ್ಯ : ಮಳವಳ್ಳಿ ನಾಗರತ್ನಗೆ ಧಾರವಾಡ ಕರ್ನಾಟಕ ವಿವಿ ಪಿ.ಹೆಚ್‌ಡಿ ಪದವಿ

ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ.
ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ “ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ” ವಿಷಯದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ‌ನೀಡಿ ಪುರಸ್ಕರಿಸಲಾಗಿದೆ.
ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಮುಖ್ಯಸ್ಥ ಫ್ರೊ. ಲೋಕೇಶ್ ಅವರ ಮಾರ್ಗದರ್ಶನದಲ್ಲಿ ನಾಗರತ್ನ ಅವರು ಮಹಾ ಪ್ರಬಂಧ ಸಿದ್ಧಪಡಿಸಿದ್ದರು.

ಎಂ. ನಾಗರತ್ನ ಅವರ ಕಿರುಪರಿಚಯ : 
ಪ್ರಸ್ತುತ ಉಡುಪಿಯ ಅಜ್ಜರಕಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಗೃಹಿಣಿ, ಮಳವಳ್ಳಿಯ ನಾಗರತ್ನ ಅವರು ಇತಿಹಾಸ ಮತ್ತು ಕನ್ನಡ ಈ ಎರಡು ವಿಷಯಗಳಲ್ಲಿ ಕ್ರಮವಾಗಿ ಬೆಂಗಳೂರು ವಿವಿ ಮತ್ತು ಮೈಸೂರಿನ ಕರಾಮು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಂ.ಎಡ್ ಪದವಿ ಅಧ್ಯಯನ ಮಾಡಿರುವ ಇವರು ಎರಡು ವರ್ಷ ಪ್ರೌಢಶಾಲಾ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಶಾಲಾ ವಿದ್ಯಾರ್ಥಿನಿಯಾಗಿದ್ದ ದಿನಗಳಿಂದಲೂ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಗಮನ ಸೆಳೆದಿದ್ದ ಇವರು NCC ‘ಬಿ’ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.

andolanait

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

2 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

2 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

2 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

2 hours ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

2 hours ago