ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ.
ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ “ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ” ವಿಷಯದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಲಾಗಿದೆ.
ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಮುಖ್ಯಸ್ಥ ಫ್ರೊ. ಲೋಕೇಶ್ ಅವರ ಮಾರ್ಗದರ್ಶನದಲ್ಲಿ ನಾಗರತ್ನ ಅವರು ಮಹಾ ಪ್ರಬಂಧ ಸಿದ್ಧಪಡಿಸಿದ್ದರು.
ಎಂ. ನಾಗರತ್ನ ಅವರ ಕಿರುಪರಿಚಯ :
ಪ್ರಸ್ತುತ ಉಡುಪಿಯ ಅಜ್ಜರಕಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಗೃಹಿಣಿ, ಮಳವಳ್ಳಿಯ ನಾಗರತ್ನ ಅವರು ಇತಿಹಾಸ ಮತ್ತು ಕನ್ನಡ ಈ ಎರಡು ವಿಷಯಗಳಲ್ಲಿ ಕ್ರಮವಾಗಿ ಬೆಂಗಳೂರು ವಿವಿ ಮತ್ತು ಮೈಸೂರಿನ ಕರಾಮು ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಂ.ಎಡ್ ಪದವಿ ಅಧ್ಯಯನ ಮಾಡಿರುವ ಇವರು ಎರಡು ವರ್ಷ ಪ್ರೌಢಶಾಲಾ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಶಾಲಾ ವಿದ್ಯಾರ್ಥಿನಿಯಾಗಿದ್ದ ದಿನಗಳಿಂದಲೂ ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಲ್ಲಿ ಗಮನ ಸೆಳೆದಿದ್ದ ಇವರು NCC ‘ಬಿ’ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…