ಮಂಡ್ಯ: ಕೇಂದ್ರ ಗೃಹಸಚಿವ ಅಮಿತ್ ಶಾ ಡಿ.30ರಂದು ನಗರಕ್ಕೆ ಭೇಟಿ ನೀಡುತ್ತಿದ್ದು ಎಲ್ಲೆಡೆ ಕೇಸರಿ ಬಾವುಟ, ಫ್ಲೆಕ್ಸ್, ಬ್ಯಾನರ್ ರಾರಾಜಿಸುತ್ತಿವೆ. ಫ್ಲೆಕ್ಸ್ಗಳಲ್ಲಿ ಪಕ್ಷೇತರ ಸಂಸದೆ ಸುಮಲತಾ ಭಾವಚಿತ್ರ ಇರುವುದು ಚರ್ಚೆಗೆ ಗ್ರಾಸವಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ಪ್ರಶ್ನೆ ಸೃಷ್ಟಿಯಾಗಿದೆ.
ಜಿಲ್ಲಾ ಹಾಲು ಒಕ್ಕೂಟದ (ಮನ್ಮುಲ್) ಆವರಣದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿಗೆ ಅಮಿತ್ ಶಾ ಶುಕ್ರವಾರ ಚಾಲನೆ ನೀಡಲಿದ್ದಾರೆ. ನಂತರ ನಗರದಲ್ಲಿ ನಡೆಯಲಿರುವ ಬಿಜೆಪಿ ಜನಸಂಪರ್ಕ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಫ್ಲೆಕ್ಸ್ ಅಳವಡಿಸಲಾಗಿದೆ.
ಶ್ರೀರಂಗಪಟ್ಟಣ ಬಿಜೆಪಿ ಮುಖಂಡ ಸಚ್ಚಿದಾನಂದ ಅಳವಡಿಸಿರುವ ಬಹುತೇಕ ಫ್ಲೆಕ್ಸ್ಗಳಲ್ಲಿ ಸುಮಲತಾ ಭಾವಚಿತ್ರಗಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿದ್ದ ಸಚ್ಚಿದಾನಂದ ಸುಮಲತಾ ಪರ ಕೆಲಸ ಮಾಡಿದ್ದರು. ಇದೇ ಕಾರಣಕ್ಕಾಗಿ ಅವರನ್ನು ಕೆಪಿಸಿಸಿ ಅವರನ್ನು ಉಚ್ಛಾಟನೆ ಮಾಡಿತ್ತು. ನಂತರ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.
‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಚ್ಚಿದಾನಂದ ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಬೆಂಬಲ ನೀಡಲಾಗುವುದು’ ಎಂದು ಸುಮಲತಾ ಘೋಷಿಸಿದ್ದರು. ಈ ಕಾರಣಕ್ಕೆ ಅಮಿತ್ ಶಾ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್ಗಳಲ್ಲಿ ಸುಮಲತಾ ಭಾವಚಿತ್ರ ಹಾಕಿಸಿದ್ದಾರೆ. ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷೇತರ ಸಂಸದೆಯ ಭಾವಚಿತ್ರ ಇರುವ ಸಂಬಂಧ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…