ಮಂಡ್ಯ: ಕೇಂದ್ರ ಗೃಹಸಚಿವ ಅಮಿತ್ ಶಾ ಡಿ.30ರಂದು ನಗರಕ್ಕೆ ಭೇಟಿ ನೀಡುತ್ತಿದ್ದು ಎಲ್ಲೆಡೆ ಕೇಸರಿ ಬಾವುಟ, ಫ್ಲೆಕ್ಸ್, ಬ್ಯಾನರ್ ರಾರಾಜಿಸುತ್ತಿವೆ. ಫ್ಲೆಕ್ಸ್ಗಳಲ್ಲಿ ಪಕ್ಷೇತರ ಸಂಸದೆ ಸುಮಲತಾ ಭಾವಚಿತ್ರ ಇರುವುದು ಚರ್ಚೆಗೆ ಗ್ರಾಸವಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ಪ್ರಶ್ನೆ ಸೃಷ್ಟಿಯಾಗಿದೆ.
ಜಿಲ್ಲಾ ಹಾಲು ಒಕ್ಕೂಟದ (ಮನ್ಮುಲ್) ಆವರಣದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿಗೆ ಅಮಿತ್ ಶಾ ಶುಕ್ರವಾರ ಚಾಲನೆ ನೀಡಲಿದ್ದಾರೆ. ನಂತರ ನಗರದಲ್ಲಿ ನಡೆಯಲಿರುವ ಬಿಜೆಪಿ ಜನಸಂಪರ್ಕ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಫ್ಲೆಕ್ಸ್ ಅಳವಡಿಸಲಾಗಿದೆ.
ಶ್ರೀರಂಗಪಟ್ಟಣ ಬಿಜೆಪಿ ಮುಖಂಡ ಸಚ್ಚಿದಾನಂದ ಅಳವಡಿಸಿರುವ ಬಹುತೇಕ ಫ್ಲೆಕ್ಸ್ಗಳಲ್ಲಿ ಸುಮಲತಾ ಭಾವಚಿತ್ರಗಳಿವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಲ್ಲಿದ್ದ ಸಚ್ಚಿದಾನಂದ ಸುಮಲತಾ ಪರ ಕೆಲಸ ಮಾಡಿದ್ದರು. ಇದೇ ಕಾರಣಕ್ಕಾಗಿ ಅವರನ್ನು ಕೆಪಿಸಿಸಿ ಅವರನ್ನು ಉಚ್ಛಾಟನೆ ಮಾಡಿತ್ತು. ನಂತರ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.
‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಚ್ಚಿದಾನಂದ ಯಾವುದೇ ಪಕ್ಷದಿಂದ ಸ್ಪರ್ಧಿಸಿದರೂ ಬೆಂಬಲ ನೀಡಲಾಗುವುದು’ ಎಂದು ಸುಮಲತಾ ಘೋಷಿಸಿದ್ದರು. ಈ ಕಾರಣಕ್ಕೆ ಅಮಿತ್ ಶಾ ಅವರಿಗೆ ಸ್ವಾಗತ ಕೋರುವ ಫ್ಲೆಕ್ಸ್ಗಳಲ್ಲಿ ಸುಮಲತಾ ಭಾವಚಿತ್ರ ಹಾಕಿಸಿದ್ದಾರೆ. ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷೇತರ ಸಂಸದೆಯ ಭಾವಚಿತ್ರ ಇರುವ ಸಂಬಂಧ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…