Mysore
21
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಮಂಡ್ಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಎಚ್. ಎನ್ ಗೋಪಾಲಕೃಷ್ಣ ನೇಮಕ

ಮಂಡ್ಯ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ. ಎಚ್ ಎನ್ ಗೋಪಾಲಕೃಷ್ಣ ಅವರು ನೇಮಕವಾಗಿದ್ದಾರೆ.

ಕೃಷ್ಣ ಅವರು 2012ನೇ ಬ್ಯಾಚ್ ನ ಐಎಎಸ್ ಅಧಿಕಾರಿ. ಹಾಸನದಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ಇವರು ಐಎಎಸ್ ಗೆ ಪದೋನ್ನತಿ ಪಡೆದ ಬಳಿಕ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿದ್ದರು.

ಈ ಹಿಂದೆ ಅಧಿಕಾರದಲ್ಲಿ ಇದ್ದಂತಹ ಎಸ್ ಅಶ್ವತಿ ಅವರನ್ನು ವರ್ಗಾವಣೆ ಮಾಡಲಾಗಿದೆ. 2021 ಫೆಬ್ರವರಿ 15ರಂದು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದ ಇವರು ಒಂದುವರೆ ವರ್ಷಗಳ ಕಾಲ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಇವರೊಂದಿಗೆ ಇವರ ಪತಿ ಐಎಎಸ್ ಅಧಿಕಾರಿ ಡಾ. ಬಗಾದಿ ಗೌತಮ್ ಅವರು ನೆರೆಯ ಮೈಸೂರು ಜಿಲ್ಲಾಧಿಕಾರಿಯಾಗಿದ್ದರು. ಇದೀಗ ಇವರಿಬ್ಬರೂ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಅಶ್ವತಿ ಅವರು ಪಸು ವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾಗಿ ವರ್ಗಾವಣೆಯಾಗಿದ್ದರೆ. ಪತಿ ಬಗಾದಿ ಗೌತಮ್ ಅವರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!