ಮಂಡ್ಯ: ಬೆಂಗಳೂರಿನ ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತವಾಗಿ ಸಿಕ್ಕ 10.50 ಲಕ್ಷ ನಗದು ಹಣದ ಸಮೇತ ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಲಾಗಿದೆ.
ಜ.4 ರ ಸಂಜೆ 7 ಗಂಟೆಗೆ ಪಿಡಬ್ಲೂಡಿ ಎಇ ಜಗದೀಶ್ 10.50 ಲಕ್ಷ ರೂ. ಹಣದೊಂದಿಗೆ ವಿಧಾನ ಸೌಧಕ್ಕೆ ತೆರಳಿದ್ದು, ಅಲ್ಲಿ ಭದ್ರತಾ ಸಿಬ್ಬಂದಿ ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ. ಆ ಸಂದರ್ಭದಲ್ಲಿ ಪೊಲೀಸರು ಹಣದ ಮೂಲದ ಬಗ್ಗೆ ಪ್ರಶ್ನೆ ಮಾಡಿದಾಗ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು, ಹಣವನ್ನು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ಹಣದ ಮೂಲ ಹುಡುಕುವಲ್ಲಿ ಪೊಲೀಸರು ಮುಂದಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ಗೌಡ ತನಿಖೆ ನಡೆಸುತ್ತಿದ್ದಾರೆ.
ಸಚಿವರಿಗೆ ಲಂಚ?:
ವಿಧಾನಸೌಧದಲ್ಲಿ ಇಷ್ಟೊಂದು ದೊಡ್ಡ ಮೊತ್ತದೊಂದಿಗೆ ಹಣ ಸಿಕ್ಕಿದ್ದು ಸಹಜವಾಗಿಯೇ ಅನುಮಾನ ಮೂಡಿಸಿದೆ. ಈ ಹಿಂದೆಯೂ ಹಲವು ಬಾರಿ ವಿಧಾನಸೌಧದಲ್ಲಿ ಹಣ ಪತ್ತೆಯಾಗಿದೆ. ಆದರೆ ಯಾರಿಗೂ ಶಿಕ್ಷೆಯಾಗಿಲ್ಲ. ಈ ಹಣವನ್ನು ವರ್ಗಾವಣೆ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳಿಗೆ ಲಂಚ ನೀಡಲು ತೆಗೆದುಕೊಂಡು ಹೋಗಿರುವ ಅನುಮಾನವಿದ್ದು, ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಸತ್ಯ ಬಯಲು ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…
ಚೆನ್ನೈ: ತಮಿಳು ನಟ ದಳಪತಿ ವಿಜಯ್ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ. 27…
ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ…