ಜಿಲ್ಲೆಗಳು

ವಿಧಾನಸೌಧದಲ್ಲಿ ಅನಧಿಕೃತವಾಗಿ ಹಣ ಸಾಗಿಸುತ್ತಿದ್ದ ಆರೋಪ : ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಬಂಧನ

ಮಂಡ್ಯ: ಬೆಂಗಳೂರಿನ ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತವಾಗಿ ಸಿಕ್ಕ 10.50 ಲಕ್ಷ ನಗದು ಹಣದ ಸಮೇತ ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಲಾಗಿದೆ.
ಜ.4 ರ ಸಂಜೆ 7 ಗಂಟೆಗೆ ಪಿಡಬ್ಲೂಡಿ ಎಇ ಜಗದೀಶ್ 10.50 ಲಕ್ಷ ರೂ. ಹಣದೊಂದಿಗೆ ವಿಧಾನ ಸೌಧಕ್ಕೆ ತೆರಳಿದ್ದು, ಅಲ್ಲಿ ಭದ್ರತಾ ಸಿಬ್ಬಂದಿ ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ. ಆ ಸಂದರ್ಭದಲ್ಲಿ ಪೊಲೀಸರು ಹಣದ ಮೂಲದ ಬಗ್ಗೆ ಪ್ರಶ್ನೆ ಮಾಡಿದಾಗ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು, ಹಣವನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಿದ್ದಾರೆ. ಇದೀಗ ಹಣದ ಮೂಲ ಹುಡುಕುವಲ್ಲಿ ಪೊಲೀಸರು ಮುಂದಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್‌ಗೌಡ ತನಿಖೆ ನಡೆಸುತ್ತಿದ್ದಾರೆ.
ಸಚಿವರಿಗೆ ಲಂಚ?:
ವಿಧಾನಸೌಧದಲ್ಲಿ ಇಷ್ಟೊಂದು ದೊಡ್ಡ ಮೊತ್ತದೊಂದಿಗೆ ಹಣ ಸಿಕ್ಕಿದ್ದು ಸಹಜವಾಗಿಯೇ ಅನುಮಾನ ಮೂಡಿಸಿದೆ. ಈ ಹಿಂದೆಯೂ ಹಲವು ಬಾರಿ ವಿಧಾನಸೌಧದಲ್ಲಿ ಹಣ ಪತ್ತೆಯಾಗಿದೆ. ಆದರೆ ಯಾರಿಗೂ ಶಿಕ್ಷೆಯಾಗಿಲ್ಲ. ಈ ಹಣವನ್ನು ವರ್ಗಾವಣೆ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳಿಗೆ ಲಂಚ ನೀಡಲು ತೆಗೆದುಕೊಂಡು ಹೋಗಿರುವ ಅನುಮಾನವಿದ್ದು, ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಸತ್ಯ ಬಯಲು ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

andolanait

Recent Posts

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

2 mins ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್‌ ವಿರುದ್ಧ ಬೆಂಗಳೂರಿನ ಕೆ.ಆರ್.‌ಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.…

3 hours ago

ಸಿಎಂ ಸಿದ್ದರಾಮಯ್ಯ ಅವರ ಇಂದಿನ ಮೈಸೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಗ್ಗೆ 11:40ಕ್ಕೆ ಮೈಸೂರು ಜಿಲ್ಲೆಯ ವರುಣದ…

3 hours ago

ಓದುಗರ ಪತ್ರ: ಯುದ್ಧ ವಿನಾಶಕಾರಿ!

ಯುದ್ಧ ವಿನಾಶಕಾರಿ! ನಿಲ್ಲುವಂತೆ ಕಾಣುವುದಿಲ್ಲ ಕೊಲ್ಲಿ ರಾಷ್ಟ್ರಗಳ ಸಂಘರ್ಷ! ಬದಲಿಗೆ ವಿಸ್ತರಿಸಿರುವುದು ನೋವು ಸಂಕಟದ ಸಂಗತಿ! ಗೆಲ್ಲಲಾಗದು ದ್ವೇಷದಲಿ ಯಾರನ್ನೂ ಪ್ರೀತಿ…

3 hours ago

ಓದುಗರ ಪತ್ರ: ಯಶಸ್ವಿನಿ : ಡಯಾಲಿಸಿಸ್ ವೆಚ್ಚ ಭರಿಸಲಿ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯಡಿಯಲ್ಲಿ ವಿಮೆ ಸೌಲಭ್ಯ ಪಡೆದಿರುವವರ ಕುಟುಂಬ ವರ್ಷಕ್ಕೆ ೫ ಲಕ್ಷರೂ. ವೆಚ್ಚದ ಚಿಕಿತ್ಸಾ ಸೌಲಭ್ಯ…

3 hours ago

ಓದುಗರ ಪತ್ರ: ರಾಜ್ಯ ಬಜೆಟ್ ಪ್ರಗತಿಯ ದಿಕ್ಸೂಚಿ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ೨೦೨೬-೨೭ನೇ ಸಾಲಿನ ಬಜೆಟ್ ಪ್ರಗತಿಯ ದಿಕ್ಸೂಚಿಯಾಗಿದೆ. ರಾಜ್ಯದ ಬಜೆಟ್ ಗಾತ್ರ ೪,೪೮,೦೦೪ ಕೋಟಿ ರೂ.…

3 hours ago