ಮಂಡ್ಯ: ಬೆಂಗಳೂರಿನ ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತವಾಗಿ ಸಿಕ್ಕ 10.50 ಲಕ್ಷ ನಗದು ಹಣದ ಸಮೇತ ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಲಾಗಿದೆ.
ಜ.4 ರ ಸಂಜೆ 7 ಗಂಟೆಗೆ ಪಿಡಬ್ಲೂಡಿ ಎಇ ಜಗದೀಶ್ 10.50 ಲಕ್ಷ ರೂ. ಹಣದೊಂದಿಗೆ ವಿಧಾನ ಸೌಧಕ್ಕೆ ತೆರಳಿದ್ದು, ಅಲ್ಲಿ ಭದ್ರತಾ ಸಿಬ್ಬಂದಿ ಪರಿಶೀಲನೆ ಮಾಡಿದಾಗ ಹಣ ಪತ್ತೆಯಾಗಿದೆ. ಆ ಸಂದರ್ಭದಲ್ಲಿ ಪೊಲೀಸರು ಹಣದ ಮೂಲದ ಬಗ್ಗೆ ಪ್ರಶ್ನೆ ಮಾಡಿದಾಗ ಯಾವುದೇ ಸ್ಪಷ್ಟ ಉತ್ತರ ನೀಡಿಲ್ಲ. ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದು, ಹಣವನ್ನು ವಶಪಡಿಸಿಕೊಂಡು ಎಫ್ಐಆರ್ ದಾಖಲಿಸಿದ್ದಾರೆ. ಇದೀಗ ಹಣದ ಮೂಲ ಹುಡುಕುವಲ್ಲಿ ಪೊಲೀಸರು ಮುಂದಾಗಿದ್ದು, ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ಗೌಡ ತನಿಖೆ ನಡೆಸುತ್ತಿದ್ದಾರೆ.
ಸಚಿವರಿಗೆ ಲಂಚ?:
ವಿಧಾನಸೌಧದಲ್ಲಿ ಇಷ್ಟೊಂದು ದೊಡ್ಡ ಮೊತ್ತದೊಂದಿಗೆ ಹಣ ಸಿಕ್ಕಿದ್ದು ಸಹಜವಾಗಿಯೇ ಅನುಮಾನ ಮೂಡಿಸಿದೆ. ಈ ಹಿಂದೆಯೂ ಹಲವು ಬಾರಿ ವಿಧಾನಸೌಧದಲ್ಲಿ ಹಣ ಪತ್ತೆಯಾಗಿದೆ. ಆದರೆ ಯಾರಿಗೂ ಶಿಕ್ಷೆಯಾಗಿಲ್ಲ. ಈ ಹಣವನ್ನು ವರ್ಗಾವಣೆ ಹಿನ್ನೆಲೆಯಲ್ಲಿ ಸಚಿವರು, ಅಧಿಕಾರಿಗಳಿಗೆ ಲಂಚ ನೀಡಲು ತೆಗೆದುಕೊಂಡು ಹೋಗಿರುವ ಅನುಮಾನವಿದ್ದು, ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಿ ಸತ್ಯ ಬಯಲು ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…