ಮಂಡ್ಯ : ಕಳೆದ ಮೂರು ತಿಂಗಳಿನಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳಿಗೆ ಅಗತ್ಯ ವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಪ್ರಕೃತಿ ವಿಕೋಪ ನಿಧಿಯಿಂದ .400 ರೂ ಕೋಟಿ ಹಣ ಬಿಡುಗಡೆ ಮಾಡುವಂತೆ ಶಾಸಕರಾದ ದಿನೇಶ್ ಗೂಳಿಗೌಡ ಮತ್ತು ಶಾಸಕರಾದ ಮಧು ಜಿ . ಮಾದೇಗೌಡ ಅವರು ಜಿಲ್ಲೆಯ ಅಬಕಾರಿ ಮತ್ತು ಉಸ್ತುವಾರಿ ಸಚಿವರಾದ ಹೆಚ್. ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿನ ಜನ – ಜಾನುವಾರು , ಕೃಷಿ – ತೋಟಗಾರಿಕೆ ಬೆಳೆಗಳ ಹಾನಿ , ಶಾಲೆಗಳು , ಆಸ್ಪತ್ರೆಗಳು , ಗ್ರಾಮೀಣ ರಸ್ತೆಗಳು / ಲೋಕೋಪಯೋಗಿ ರಸ್ತೆಗಳು , ಪಟ್ಟಣ ಪಂಚಾಯಿತಿ / ನಗರಸಭೆ / ಪುರಸಭೆ , ಸಣ್ಣ ನೀರಾವರಿ , ವಿದ್ಯುತ್ ಕಂಬಗಳ ಲೈನ್ಗಳು ಸೇರಿದಂತೆ ಜಿಲ್ಲೆಯ ಮೂಲಭೂತ ಸೌಲಭ್ಯ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು
ಹಾನಿಗೊಳಗಾದ ವಿವರ ಇಂತಿದೆ.
– 264.54 ಹೆಕ್ಟೇರ್ ಕೃಷಿ ಬೆಳೆಹಾನಿ
> 707.81 ಹೆಕ್ಟೇರ್ ‘ ತೋಟಗಾರಿಕೆ ಬೆಳೆಗಳ ಹಾನಿ
> 259 ಶಾಲೆಗಳಿಗೆ ಹಾನಿ
> 535 ಶಾಲಾ ಕೊಠಡಿ ಹಾನಿ
> 51 ಸೇತುವೆಗಳು
> 25 ಅಂಗನವಾಡಿ ಕೇಂದ್ರಗಳ ಹಾನಿ
> 245.4 ಕಿ.ಮೀ. – 180 ಹಳ್ಳಿಗಳ ರಸ್ತೆಗಳು ಹಾಳಾಗಿವೆ .
> 1000 ಕ್ಕೂ ಹೆಚ್ಚ ಮನೆಗಳ ಹಾನಿ
ಪ್ರಾಥಮಿಕ ಅಂದಾಜು ಒಟ್ಟಾರೆ 7 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 400 ಕೋಟಿಗೂ ಹೆಚ್ಚು ಅಸ್ತಿ – ಪಾಸ್ತಿ , ಜನ – ಜಾನುವಾರುಗಳ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ .
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮದ್ದೂರು. ಮಂಡ್ಯ. ಮಳವಳ್ಳಿ. ನಾಗಮಂಗಲ. ಪಾಂಡವಪುರ. KR ಪೇಟೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಗಳಲ್ಲಿ ತುರ್ತಾಗಿ ಮೂಲಭೂತ ಸೌಕರ್ಯಗಳು ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ನಿಧಿಯಿಂದ ತುರ್ತಾಗಿ ಹಣ ಬಿಡುಗಡೆಗೊಳಿಸಲು ಸೂಕ್ತ ಆದೇಶ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಸಂಕಷ್ಟದಲ್ಲಿರುವ ಮಂಡ್ಯ ಜಿಲ್ಲೆಯ ಜನತೆಗೆ ನೆರವಾಗಬೇಕೆಂದು ವಿನಂತಿಸಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…