ಜಿಲ್ಲೆಗಳು

ಮಂಡ್ಯ : ಮಳೆ ಹಾನಿ ಪ್ರದೇಶಗಳಿಗೆ 400 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ

ಮಂಡ್ಯ : ಕಳೆದ ಮೂರು ತಿಂಗಳಿನಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳಿಗೆ ಅಗತ್ಯ ವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಪ್ರಕೃತಿ ವಿಕೋಪ ನಿಧಿಯಿಂದ .400 ರೂ ಕೋಟಿ ಹಣ ಬಿಡುಗಡೆ ಮಾಡುವಂತೆ  ಶಾಸಕರಾದ ದಿನೇಶ್ ಗೂಳಿಗೌಡ ಮತ್ತು ಶಾಸಕರಾದ ಮಧು ಜಿ . ಮಾದೇಗೌಡ ಅವರು ಜಿಲ್ಲೆಯ ಅಬಕಾರಿ ಮತ್ತು ಉಸ್ತುವಾರಿ ಸಚಿವರಾದ ಹೆಚ್. ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಕಳೆದ  ಮೂರು ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿನ ಜನ – ಜಾನುವಾರು , ಕೃಷಿ – ತೋಟಗಾರಿಕೆ ಬೆಳೆಗಳ ಹಾನಿ , ಶಾಲೆಗಳು , ಆಸ್ಪತ್ರೆಗಳು , ಗ್ರಾಮೀಣ ರಸ್ತೆಗಳು / ಲೋಕೋಪಯೋಗಿ ರಸ್ತೆಗಳು , ಪಟ್ಟಣ ಪಂಚಾಯಿತಿ / ನಗರಸಭೆ / ಪುರಸಭೆ , ಸಣ್ಣ ನೀರಾವರಿ , ವಿದ್ಯುತ್ ಕಂಬಗಳ ಲೈನ್‌ಗಳು ಸೇರಿದಂತೆ ಜಿಲ್ಲೆಯ ಮೂಲಭೂತ ಸೌಲಭ್ಯ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು
ಹಾನಿಗೊಳಗಾದ ವಿವರ ಇಂತಿದೆ.
– 264.54 ಹೆಕ್ಟೇರ್ ಕೃಷಿ ಬೆಳೆಹಾನಿ
> 707.81 ಹೆಕ್ಟೇರ್‌ ‘ ತೋಟಗಾರಿಕೆ ಬೆಳೆಗಳ ಹಾನಿ
> 259 ಶಾಲೆಗಳಿಗೆ ಹಾನಿ
> 535 ಶಾಲಾ ಕೊಠಡಿ ಹಾನಿ
> 51 ಸೇತುವೆಗಳು
> 25 ಅಂಗನವಾಡಿ ಕೇಂದ್ರಗಳ ಹಾನಿ
> 245.4 ಕಿ.ಮೀ. – 180 ಹಳ್ಳಿಗಳ ರಸ್ತೆಗಳು ಹಾಳಾಗಿವೆ .
> 1000 ಕ್ಕೂ ಹೆಚ್ಚ ಮನೆಗಳ ಹಾನಿ
ಪ್ರಾಥಮಿಕ ಅಂದಾಜು ಒಟ್ಟಾರೆ 7 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 400 ಕೋಟಿಗೂ ಹೆಚ್ಚು ಅಸ್ತಿ – ಪಾಸ್ತಿ , ಜನ – ಜಾನುವಾರುಗಳ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ .
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮದ್ದೂರು. ಮಂಡ್ಯ. ಮಳವಳ್ಳಿ. ನಾಗಮಂಗಲ. ಪಾಂಡವಪುರ. KR ಪೇಟೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಗಳಲ್ಲಿ ತುರ್ತಾಗಿ ಮೂಲಭೂತ ಸೌಕರ್ಯಗಳು ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ನಿಧಿಯಿಂದ ತುರ್ತಾಗಿ ಹಣ ಬಿಡುಗಡೆಗೊಳಿಸಲು ಸೂಕ್ತ ಆದೇಶ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಸಂಕಷ್ಟದಲ್ಲಿರುವ ಮಂಡ್ಯ ಜಿಲ್ಲೆಯ ಜನತೆಗೆ ನೆರವಾಗಬೇಕೆಂದು ವಿನಂತಿಸಿದರು.

 

andolanait

Recent Posts

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

10 mins ago

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

20 mins ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

42 mins ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

3 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

3 hours ago

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…

3 hours ago