ಜಿಲ್ಲೆಗಳು

ಮಂಡ್ಯ : ಮಳೆ ಹಾನಿ ಪ್ರದೇಶಗಳಿಗೆ 400 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ

ಮಂಡ್ಯ : ಕಳೆದ ಮೂರು ತಿಂಗಳಿನಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳಿಗೆ ಅಗತ್ಯ ವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಪ್ರಕೃತಿ ವಿಕೋಪ ನಿಧಿಯಿಂದ .400 ರೂ ಕೋಟಿ ಹಣ ಬಿಡುಗಡೆ ಮಾಡುವಂತೆ  ಶಾಸಕರಾದ ದಿನೇಶ್ ಗೂಳಿಗೌಡ ಮತ್ತು ಶಾಸಕರಾದ ಮಧು ಜಿ . ಮಾದೇಗೌಡ ಅವರು ಜಿಲ್ಲೆಯ ಅಬಕಾರಿ ಮತ್ತು ಉಸ್ತುವಾರಿ ಸಚಿವರಾದ ಹೆಚ್. ಗೋಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲೆಯಲ್ಲಿ ಕಳೆದ  ಮೂರು ತಿಂಗಳಿನಿಂದ ಸುರಿದ ಭಾರಿ ಮಳೆಯಿಂದಾಗಿ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿನ ಜನ – ಜಾನುವಾರು , ಕೃಷಿ – ತೋಟಗಾರಿಕೆ ಬೆಳೆಗಳ ಹಾನಿ , ಶಾಲೆಗಳು , ಆಸ್ಪತ್ರೆಗಳು , ಗ್ರಾಮೀಣ ರಸ್ತೆಗಳು / ಲೋಕೋಪಯೋಗಿ ರಸ್ತೆಗಳು , ಪಟ್ಟಣ ಪಂಚಾಯಿತಿ / ನಗರಸಭೆ / ಪುರಸಭೆ , ಸಣ್ಣ ನೀರಾವರಿ , ವಿದ್ಯುತ್ ಕಂಬಗಳ ಲೈನ್‌ಗಳು ಸೇರಿದಂತೆ ಜಿಲ್ಲೆಯ ಮೂಲಭೂತ ಸೌಲಭ್ಯ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು
ಹಾನಿಗೊಳಗಾದ ವಿವರ ಇಂತಿದೆ.
– 264.54 ಹೆಕ್ಟೇರ್ ಕೃಷಿ ಬೆಳೆಹಾನಿ
> 707.81 ಹೆಕ್ಟೇರ್‌ ‘ ತೋಟಗಾರಿಕೆ ಬೆಳೆಗಳ ಹಾನಿ
> 259 ಶಾಲೆಗಳಿಗೆ ಹಾನಿ
> 535 ಶಾಲಾ ಕೊಠಡಿ ಹಾನಿ
> 51 ಸೇತುವೆಗಳು
> 25 ಅಂಗನವಾಡಿ ಕೇಂದ್ರಗಳ ಹಾನಿ
> 245.4 ಕಿ.ಮೀ. – 180 ಹಳ್ಳಿಗಳ ರಸ್ತೆಗಳು ಹಾಳಾಗಿವೆ .
> 1000 ಕ್ಕೂ ಹೆಚ್ಚ ಮನೆಗಳ ಹಾನಿ
ಪ್ರಾಥಮಿಕ ಅಂದಾಜು ಒಟ್ಟಾರೆ 7 ವಿಧಾನಸಭಾ ಕ್ಷೇತ್ರಗಳಿಂದ ಸುಮಾರು 400 ಕೋಟಿಗೂ ಹೆಚ್ಚು ಅಸ್ತಿ – ಪಾಸ್ತಿ , ಜನ – ಜಾನುವಾರುಗಳ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ .
ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಮದ್ದೂರು. ಮಂಡ್ಯ. ಮಳವಳ್ಳಿ. ನಾಗಮಂಗಲ. ಪಾಂಡವಪುರ. KR ಪೇಟೆ. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ಗಳಲ್ಲಿ ತುರ್ತಾಗಿ ಮೂಲಭೂತ ಸೌಕರ್ಯಗಳು ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ನಿಧಿಯಿಂದ ತುರ್ತಾಗಿ ಹಣ ಬಿಡುಗಡೆಗೊಳಿಸಲು ಸೂಕ್ತ ಆದೇಶ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಸಂಕಷ್ಟದಲ್ಲಿರುವ ಮಂಡ್ಯ ಜಿಲ್ಲೆಯ ಜನತೆಗೆ ನೆರವಾಗಬೇಕೆಂದು ವಿನಂತಿಸಿದರು.

 

andolanait

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago