ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ ಪೈಪುಗಳ ಮುಖಾಂತರ ಮನೆಗಳಿಗೆ ನೀರು ನುಗ್ಗಿದೆ.

ರಾತ್ರಿ ಸುಮಾರು 12 ರಿಂದ ಒಂದು ಮೂವತ್ತರ ತನಕ ಸತತವಾಗಿ ಮಳೆ ಸುರಿದ ಪರಿಣಾಮ ಅವಾಂತರ ಸೃಷ್ಟಿಯಾಗಿದ್ದು ಮನೆಯಲ್ಲಿ ಮಲಗಿದ್ದ ಮಕ್ಕಳು ಮಹಿಳೆಯರು ರಾತ್ರಿಪೂರ ನಿದ್ದೆಗೆಟ್ಟು ಜೀವಭಯದಲ್ಲಿ ಬೆಳಗಿನವರೆಗೆ ಕಾಲ ಕಳೆಯುವಂತಾಯ್ತು.

ರಾತ್ರಿ ಏಕಾಏಕಿ ಪೈಪುಗಳ ಮುಖಾಂತರ ನೀರು ನುಗ್ಗಿದ್ದರಿಂದ ಮನೆಯಲ್ಲಿರುವ ವಸ್ತುಗಳನ್ನು ಎತ್ತಲು ಸಾಧ್ಯವಾಗಿಲ್ಲ. ಅಡಿಗೆ ಸಾಮಗ್ರಿಗಳು. ಪಾತ್ರೆಗಳು ಬಟ್ಟೆಗಳು ಎಲ್ಲಾ ನೀರಿನಲ್ಲಿ ತೆಲುವ ದೃಶ್ಯ ಸಾಮಾನ್ಯವಾಗಿತ್ತು. ಬೆಳ್ಳಂಬೆಳಗ್ಗೆ ಎದ್ದು ಮನೆಯ ಮಾಲೀಕರು ಗಳು ಹಾಗೂ ಅಕ್ಕಪಕ್ಕದವರು ಸೇರಿ ಮನೆಗಳನ್ನು ಶುಚಿ ಮಾಡುವ ಕಾರ್ಯ ನಡೆಯಿತು.

ಅಂಗನವಾಡಿ ಕಾರ್ಯಕರ್ತೆಯರ ಆದ ಶಾರದಮ್ಮ ಹಾಗೂ ಗಾಯತ್ರಿ ಅಮ್ಮನವರ ಮನೆಗಳಿಗೆ ಅತಿ ಹೆಚ್ಚು ನೀರು ನುಗ್ಗಿ ಹಾನಿಯನ್ನು ಉಂಟು ಮಾಡಿದೆ ಸಂಬಂಧ ಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.





