ಮಂಡ್ಯ : ನಿನ್ನೆ ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ನಗರದ ಹಾಲಹಳ್ಳಿ ಕೆರೆ ಫಸ್ಟ್ ಕ್ರಾಸ್ ನಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು ಅವಾಂತರ ಸೃಷ್ಟಿಯಾಗಿದೆ. ಇಡೀ ರಾತ್ರಿ ಸುರಿದ ಮಳೆಗೆ ಆಲಳ್ಳಿ ಕೆರೆ ಮುಸ್ಲಿಂಕೆರೆ ನಡುವೆ ಬರುವ ರಾಜಕಾಲ್ವೆ ತುಂಬಿ ಡ್ರೈನೇಜ್ ಪೈಪುಗಳ ಮುಖಾಂತರ ಮನೆಗಳಿಗೆ ನೀರು ನುಗ್ಗಿದೆ.
ರಾತ್ರಿ ಸುಮಾರು 12 ರಿಂದ ಒಂದು ಮೂವತ್ತರ ತನಕ ಸತತವಾಗಿ ಮಳೆ ಸುರಿದ ಪರಿಣಾಮ ಅವಾಂತರ ಸೃಷ್ಟಿಯಾಗಿದ್ದು ಮನೆಯಲ್ಲಿ ಮಲಗಿದ್ದ ಮಕ್ಕಳು ಮಹಿಳೆಯರು ರಾತ್ರಿಪೂರ ನಿದ್ದೆಗೆಟ್ಟು ಜೀವಭಯದಲ್ಲಿ ಬೆಳಗಿನವರೆಗೆ ಕಾಲ ಕಳೆಯುವಂತಾಯ್ತು.
ರಾತ್ರಿ ಏಕಾಏಕಿ ಪೈಪುಗಳ ಮುಖಾಂತರ ನೀರು ನುಗ್ಗಿದ್ದರಿಂದ ಮನೆಯಲ್ಲಿರುವ ವಸ್ತುಗಳನ್ನು ಎತ್ತಲು ಸಾಧ್ಯವಾಗಿಲ್ಲ. ಅಡಿಗೆ ಸಾಮಗ್ರಿಗಳು. ಪಾತ್ರೆಗಳು ಬಟ್ಟೆಗಳು ಎಲ್ಲಾ ನೀರಿನಲ್ಲಿ ತೆಲುವ ದೃಶ್ಯ ಸಾಮಾನ್ಯವಾಗಿತ್ತು. ಬೆಳ್ಳಂಬೆಳಗ್ಗೆ ಎದ್ದು ಮನೆಯ ಮಾಲೀಕರು ಗಳು ಹಾಗೂ ಅಕ್ಕಪಕ್ಕದವರು ಸೇರಿ ಮನೆಗಳನ್ನು ಶುಚಿ ಮಾಡುವ ಕಾರ್ಯ ನಡೆಯಿತು.
ಅಂಗನವಾಡಿ ಕಾರ್ಯಕರ್ತೆಯರ ಆದ ಶಾರದಮ್ಮ ಹಾಗೂ ಗಾಯತ್ರಿ ಅಮ್ಮನವರ ಮನೆಗಳಿಗೆ ಅತಿ ಹೆಚ್ಚು ನೀರು ನುಗ್ಗಿ ಹಾನಿಯನ್ನು ಉಂಟು ಮಾಡಿದೆ ಸಂಬಂಧ ಪಟ್ಟವರು ಇತ್ತ ಗಮನಹರಿಸಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜುಂಡೇಶ್ವರನ ದೇವಾಲಯದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ…
ಮಂಡ್ಯ: ಅಮೆರಿಕಾ- ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಕ್ರಿಸ್ತರಾಜ ಶಾಲೆಯ ಶಿಕ್ಷಕ ಮನೋಜ್ ಕುಮಾರ್.ಪಿ. ಅವರು ರಾಷ್ಟ್ರೀಯ…